ಸಂಗ್ರಹ ಚಿತ್ರ 
ರಾಜಕೀಯ

ಸುಗಮ ಕಲಾಪ: ನಿಯಮಗಳಿಗೆ ತಿದ್ದುಪಡಿ ತರಲು ಜಂಟಿ ಸದನ ಸಮಿತಿ ನಿರ್ಧಾರ

ವಿಧಾನ ಮಂಡಲಗಳ ಅಧಿವೇಶನದಲ್ಲಿ ಸುಗಮ ಕಲಾಪ ನಡೆಸಲು ಅನುವಾಗುವಂತೆ ನಿಯಮಗಳಿಗೆ ತಿದ್ದುಪಡಿ ತರಲು ಜಂಟಿ ಸದನ ಸಮಿತಿ ನಿರ್ಧರಿಸಿದೆ.

ಬೆಂಗಳೂರು: ವಿಧಾನ ಮಂಡಲಗಳ ಅಧಿವೇಶನದಲ್ಲಿ ಸುಗಮ ಕಲಾಪ ನಡೆಸಲು ಅನುವಾಗುವಂತೆ ನಿಯಮಗಳಿಗೆ ತಿದ್ದುಪಡಿ ತರಲು ಜಂಟಿ ಸದನ ಸಮಿತಿ ನಿರ್ಧರಿಸಿದೆ.

ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಮತ್ತು ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅಧ್ಯಕ್ಷರಾಗಿರುವ ಜಂಟಿ ಸದನ ಸಮಿತಿಯ ಮೊದಲ ಸಭೆ ನಂತರ ಮಾತನಾಡಿದ ಕೋಳಿವಾಡ, ಗಮನಸೆಳೆಯುವ ಸೂಚನೆಗಳ ಮೇಲೆ ನಡೆಯುವ ಚರ್ಚೆ ಬಳಿಕವೇ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡಬೇಕು ಎಂಬ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಲಾಪಕ್ಕೆ 1 ಗಂಟೆ ಮೊದಲು ನಿಲುವಳಿ ಸೂಚನೆ ಪ್ರಸ್ತಾಪಿಸಲು ಅನುಮತಿ ಕೋರಬೇಕು ಎಂಬ ನಿಯಮಕ್ಕೆ ಮಧ್ಯಾಹ್ನ 2 ರ ಬಳಿಕ ನಿಲುವಳಿ ಸೂಚನೆ ಪ್ರಸ್ತಾವನೆ ಸಲ್ಲಿಸುವುದು ಎಂಬ ಬದಲಾವಣೆ ತರಲು ನಿರ್ಧರಿಸಲಾಗಿದೆ ಎಂದರು. ನಿಯಮಗಳಿಗೆ ತಿದ್ದುಪಡಿ ಮಾಡಿದ ಬಳಿಕ ಕಲಾಪ ಆರಂಭದಲ್ಲಿ ಸಭಾಧ್ಯಕ್ಷರ ಪೀಠದ ಮುಂದೆ ಧರಣಿ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಮೊದಲ ದಿನವೇ ವರದಿ ಮಂಡಿಸಿ ಅನುಮೋದನೆ ಪಡೆಯಲಾಗುವುದು. ಈ ಅಧಿವೇಶನದಲ್ಲಿ ಹೊಸ ನಿಯಮಗಳಂತೆ ಕಲಾಪ ನಡೆಸಲಾಗುವುದು ಎಂದು ಕೋಳಿವಾಡ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT