ಎಸ್.ಎಂ ಕೃಷ್ಣ 
ರಾಜಕೀಯ

ನೋಟು ನಿಷೇಧ ಸ್ವಾಗತಾರ್ಹ: ಅಧಿಕಾರಿಗಳ ಅಕ್ರಮ ಆಸ್ತಿ ಅಸಹ್ಯಕರ: ಎಸ್.ಎಂ ಕೃಷ್ಣ

ಆದಾಯ ತೆರಿಗೆ ದಾಳಿಗೆ ಒಳಗಾದ ಇಬ್ಬರು ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಅಸಹ್ಯಕರ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ...

ಬೆಂಗಳೂರು: ಆದಾಯ ತೆರಿಗೆ ದಾಳಿಗೆ ಒಳಗಾದ ಇಬ್ಬರು ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಅಸಹ್ಯಕರ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಕ್ರಮ ಸಂಪತ್ತು ಹೊಂದಿದ್ದ ಆ ಇಬ್ಬರನ್ನೂ ಕೇವಲ ಅಮಾನತುಗೊಳಿಸಿರುವುದು ಸರಿಯಾದ ಶಿಕ್ಷೆಯಲ್ಲ. ಅವರಿಗೆ ಗರಿಷ್ಠ ಮಟ್ಟದ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಬಳಿ ಕೋಟ್ಯಂತರ ನಗದು, ಚಿನ್ನಾಭರಣ, ಐಷಾರಾಮಿ ಕಾರುಗಳು ಪತ್ತೆಯಾಗಿರುವುದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾ, ಇದೊಂದು ಅತ್ಯಂತ ನಾಚಿಕೆಗೇಡು ಮತ್ತು ಅಸಹ್ಯಕರ ಬೆಳವಣಿಗೆ ಎಂದು ಹೇಳಿದ್ದಾರೆ.

ದೇಶದ ಆರ್ಥಿಕ ಸುಧಾರಣೆ ದೃಷ್ಟಿಯಿಂದ 500 ಮತ್ತು 1000 ಮುಖಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಸ್ವಾಗತಿಸಿದ್ದಾರೆ. ಹಳೆಯ ನೋಟುಗಳನ್ನು ನಿಷೇಧ ಮಾಡುವ ಮೊದಲು ಜನಸಾಮಾನ್ಯರಿಗೆ ತೊಂದರೆ ಆಗದ ರೀತಿಯಲ್ಲಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂದು  ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT