ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ 
ರಾಜಕೀಯ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಲ್ಲಿ ಭಾಗವಹಿಸಿದವರ ವಿರುದ್ಧ ಕ್ರಮ: ಬಿಜೆಪಿ ಎಚ್ಚರಿಕೆ

ಪಕ್ಷದ ನಿಯಮಗಳನ್ನು ಮೀರಿ ಹೊರಗೆ ಚಟುವಟಿಕೆಗಳನ್ನು ನಡೆಸಿದರೆ ಗಂಭೀರ ಪರಿಸ್ಥಿತಿ...

ಬೆಂಗಳೂರು: ಪಕ್ಷದ ನಿಯಮಗಳನ್ನು ಮೀರಿ ಹೊರಗೆ ಚಟುವಟಿಕೆಗಳನ್ನು ನಡೆಸಿದರೆ ಗಂಭೀರ ಪರಿಸ್ಥಿತಿ ಎದುರಿಸಬೇಕಾದೀತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಅಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಮತ್ತು ಅದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಮತ್ತು ಅದರಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ತೊಡಗಿಸಿಕೊಂಡಿರುವುದರ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಈ ಪ್ರತಿಕ್ರಿಯೆ ನೀಡಿದರು.
ಪಕ್ಷಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ಪಕ್ಷದಿಂದಲೇ ಮಾಡಬೇಕು. ಪಕ್ಷದಿಂದ ಹೊರಗೆ ಏನಾದರೂ ಚಟುವಟಿಕೆ ನಡೆಸಿದರೆ ಅದನ್ನು ನಾವು ಉತ್ತೇಜಿಸುವುದಿಲ್ಲ ಮತ್ತು ಸಹಿಸುವುದು ಕೂಡ ಇಲ್ಲ. ಅಂತಹ ಚಟುವಟಿಕೆಗಳಲ್ಲಿ ಭಾಗವಹಿಸಿದ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಈಶ್ವರಪ್ಪ ಅವರು ಬಿಜೆಪಿಯ ಹಿರಿಯ ನಾಯಕರು. ಅವರಿಗೆ ಪಕ್ಷದ ನಿಯಮ ಅರ್ಥವಾಗುತ್ತದೆ ಎಂಬ ವಿಶ್ವಾಸ ನನಗಿದೆ. ಈ ಸಮಸ್ಯೆಯನ್ನು ಅವರು ಬಗೆಹರಿಸಿಕೊಳ್ಳಬಹುದು. ಹಿಂದುಳಿದ ವರ್ಗಗಳ ಹಿತಾಸಕ್ತಿಯನ್ನು ಕಾಪಾಡಲು ಈಗಾಗಲೇ ಒಬಿಸಿ ಮೋರ್ಚಾವಿದೆ. ಅದರ ಹೊರತಾಗಿ ಬಿಜೆಪಿ ಇತರ ಸಂಘಟನೆಗಳನ್ನು ಬೆಂಬಲಿಸುವುದಿಲ್ಲ ಎಂದು ಮುರಳೀಧರ ರಾವ್ ಸ್ಪಷ್ಟಪಡಿಸಿದರು. 
ನಾಳೆ ಬೆಳಗಾವಿಯಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ಸಭೆಯಲ್ಲಿ ಭಾಗವಹಿಸಲಿರುವ ಈಶ್ವರಪ್ಪ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ಎಂದು ಕೇಳಿದ್ದಕ್ಕೆ, ಈಶ್ವರಪ್ಪ ಅವರು ಭಾಗವಹಿಸುತ್ತಾರೆಯೇ, ಇಲ್ಲವೇ ನೋಡಬೇಕು ಎಂದು ಹೇಳಿದರು.
ಯಡಿಯೂರಪ್ಪ ಅವರನ್ನು ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಘೋಷಿಸಲಾಗಿದೆ. ಅವರು ರಾಜ್ಯಾಧ್ಯಕ್ಷರು ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ನಾಯಕರು ಎಂದು ಮುರಳೀಧರ ರಾವ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!

SCROLL FOR NEXT