ಸಿದ್ದರಾಮಯ್ಯ 
ರಾಜಕೀಯ

ಎಲ್ಲಾ ವರ್ಗದ ಸಮುದಾಯಕ್ಕೂ ಶೇ.70 ರಷ್ಟು ಮೀಸಲಾತಿ ಬೇಕು: ಸಿಎಂ

ಸಂವಿಧಾನದ ಆಶಯ ಈಡೇರಬೇಕಾದರೆ ಜನಸಂಖ್ಯೆ ಆಧಾರಿತ ಮೀಸಲಾತಿ ಜಾರಿಗೆ ಬರಬೇಕು ಎಂಬುದು ನನ್ನ ಸ್ಪಷ್ಟ ನಿಲುವು. ಎಂತಹ ಅಡ್ಡಿ ಆತಂಕಗಳು ...

ಹುಬ್ಬಳ್ಳಿ: ಸಂವಿಧಾನದ ಆಶಯ ಈಡೇರಬೇಕಾದರೆ ಜನಸಂಖ್ಯೆ ಆಧಾರಿತ ಮೀಸಲಾತಿ ಜಾರಿಗೆ ಬರಬೇಕು ಎಂಬುದು ನನ್ನ ಸ್ಪಷ್ಟ ನಿಲುವು. ಎಂತಹ ಅಡ್ಡಿ ಆತಂಕಗಳು ಎದುರಾದರೂ ಅದನ್ನು ಅನುಷ್ಠಾನಕ್ಕೆ ತರಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಮಾದಿಗರ ಬೃಹತ್‌ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ನಾವೇನಿದ್ದರೂ ಅದನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಹುದಷ್ಟೇ’ ಎಂದರು.

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಮಾತ್ರವಲ್ಲ, ಸಕಲ ಸೌಲಭ್ಯವೂ ಸಿಗಬೇಕು ಎನ್ನುವುದರ ಪರ ಇರುವವನು ನಾನು. ಹೀಗಾಗಿ ನನ್ನ ಮಾತನ್ನು ನಂಬಿ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಸಂಪುಟದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳನ್ನು ಸಮಾವೇಶದಲ್ಲಿ ಘೋಷಿಸಲು ಆಗುವುದಿಲ್ಲ ಎಂದು ಮನವೊಲಿಸುವ ಪ್ರಯತ್ನ ಮಾಡಿದರು.

ಜನಸಂಖ್ಯೆ ಆಧಾರದ ಮೇಲೆ ಸವಲತ್ತು ಸಿಗಬೇಕು ಎನ್ನುವ ಕಾರಣದಿಂದಲೇ ಜಾತಿ ಜನಗಣತಿ ಮಾಡಿಸಲಾಗಿದೆ. ಅದರ ವರದಿಯೂ ಜನವರಿಗೆ ಸಿಗಲಿದೆ. ಆ ವರದಿಯನ್ನೂ ಗಮನದಲ್ಲಿ ಇಟ್ಟುಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಸದ್ಯ ಶೇ 50ರಷ್ಟು ಮೀಸಲಾತಿ ಇದ್ದು, ಅದನ್ನು ಶೇ 70ಕ್ಕೆ ಹೆಚ್ಚಿಸುವ ಸಂಬಂಧ ಸಂವಿಧಾನ ತಿದ್ದುಪಡಿಗೆ ಶಿಫಾರಸು ಮಾಡಲಾಗುವುದು. ಈ ವಿಷಯವನ್ನು ವಿಧಾನ ಪರಿಷತ್ತಿನಲ್ಲಿಯೂ ಪ್ರಸ್ತಾಪ ಮಾಡಿದ್ದು, ಮುಂದಿನ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಭಾಷಣದ ವೇಳೆ ಮಾದಿಗ ಸಮುದಾಯವನ್ನು ಸಿಎಂ ಸಿದ್ದರಾಮಯ್ಯ ಆದಿ ಜಾಂಬವ ಸಮುದಾಯ ಎಂದು ಕರೆದರು. ಈ ವೇಳೆ ಮಾದಿಗ ಎಂದು ಕರೆಯುವಂತೆ ನೆರೆದಿದ್ದವರು ಒತ್ತಾಯಿಸಿದರು. ಇದಕ್ಕೊಪ್ಪದ ಸಿಎಂ ಸಿದ್ದರಾಮಯ್ಯ, ಬೇರೆ ಯಾವುದೇ ನಾಯಕರು ಬೇಕಾದರೆ ಹಾಗೆ ಕರೆಯಲಿ. ನಾನು ರಾಜ್ಯದ ಮುಖ್ಯಮಂತ್ರಿ. ಆ ಪದವನ್ನು ನಾನು ಹೇಳಬಾರದು. ದಯವಿಟ್ಟು ನನಗೆ ಬಲವಂತ ಮಾಡಬೇಡಿ ಎಂದು ಸಿ.ಎಂ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT