ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ನಂಜನಗೂಡು ವಿಧಾನಸಭೆ ಉಪಚುನಾವಣೆಯಲ್ಲಿ ಸಚಿವರ ಪುತ್ರನಿಗೆ ಟಿಕೆಟ್: ಶ್ರೀನಿವಾಸ್ ಪ್ರಸಾದ್

ನಾನು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಬೇಕು ಎಂದು ನಿರ್ಧರಿಸಿದ್ದೆ ಆದರೆ ಸಿಎಂ ಸಿದ್ದರಾಮಯ್ಯ ಅವರ ವರ್ತನೆ, ನನ್ನನ್ನು ಸಂಪುಟದಿಂದ ...

ಬೆಂಗಳೂರು: ನಾನು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಬೇಕು ಎಂದು ನಿರ್ಧರಿಸಿದ್ದೆ ಆದರೆ ಸಿಎಂ ಸಿದ್ದರಾಮಯ್ಯ ಅವರ ವರ್ತನೆ, ನನ್ನನ್ನು ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಸಕಾರಣ ನೀಡದಿದ್ದದ್ದು ನನಗೆ ತುಂಬಾ ನೋವುಂಟು ಮಾಡಿದೆ ಎಂದು ಮಾಜಿ ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು. ಸಿದ್ದರಾಮಯ್ಯ ಅವರು ನನ್ನ ಜೊತೆ ನಡೆದುಕೊಂಡು ರೀತಿ ಹಾಗೂ ಅವರ ವರ್ತನೆ, ನಾನು ಉಪ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವಂತೆ ಮಾಡಿದೆ. ಅನಾವಶ್ಯಕವಾಗಿ ಮತ್ತೊಂದು ಚುನಾವಣೆ ಎಂದುರಾಗಿದ್ದಕ್ಕೆ ನಾನು ನಂಜನಗೂಡು ಜನತೆ ಬಳಿ ಕ್ಷಮೆ ಯಾಚಿಸುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.

ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ನಂಜನಗೂಡು ವಿಧಾನ ಸಭೆಗೆ ಟಿಕೆಟ್ ಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿಸಿದ ಅವರು, ನಂಜನಗೂಡು ವಿಧಾನಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ನಿರ್ಧರಿಸುವುದಾಗಿ ಹೇಳಿದ್ದಾರೆ. ಜನವರಿ 2 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT