ಕೆ,ಎಸ್ ಈಶ್ವರಪ್ಪ ಮತ್ತು ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ ಹೊರತುಪಡಿಸಿ ರಾಯಣ್ಣ ಬ್ರಿಗೇಡ್ ಗೆ ಪಕ್ಷದಲ್ಲಿ ಯಾರ ವಿರೋಧವಿಲ್ಲ: ಈಶ್ವರಪ್ಪ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಾರ್ಯ ಚಟುವಟಿಕೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೇ ಉಳಿದ ಯಾರೂ ...

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್  ಕಾರ್ಯ ಚಟುವಟಿಕೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೇ ಉಳಿದ ಯಾರೂ ಕೂಡ ವಿರೋಧ ವ್ಯಕ್ತ ಪಡಿಸಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ಪಕ್ಷದ ಸಹಕಾರದೊಂದಿಗೆ ಬ್ರಿಗೇಡ್ ಸ್ಥಾಪಿಸಿದ್ದೇನೆ. ನಾನು ಈ ಸಂಘಟನೆ ಸ್ಥಾಪಿಸಿರುವುದಕ್ಕೆ ಬಿಜೆಪಿಯಲ್ಲಿ ಯಾರ ವಿರೋಧವೂ ಇಲ್ಲ ಎಂದು ಹೇಳಿದ್ದಾರೆ.

ಬಾಗಲಕೋಟೆಯ ಕೂಡಲ ಸಂಗಮದಲ್ಲಿ ಜನವರಿ 26 ರಂದು ನಡೆಯುವ ಬ್ರಿಗೇಡ್ ಸಮಾವೇಶ ಸಂಬಂಧ ನಡೆದ ಚರ್ಚೆಯಲ್ಲಿ ಅವರು ಪಾಲ್ಗೊಂಡಿದ್ದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬ್ರಿಗೇಡ್ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ.ಹಿಂದುಳಿದ ವರ್ಗಗಳ ಸಮುದಾಯಗಳಿಗಾಗಿ ಸ್ಥಾಪಿಸಿರುವ ರಾಯಣ್ಣ ಬ್ರಿಗೇಡ್ ಬಗ್ಗೆ ಅವರಿಗೆಲ್ಲಾ ಒಳ್ಳೆಯ ಅಭಿಪ್ರಾಯವಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಗೆ ಬಹುಮತ ಹಾಗೂ ಯಡಿಯರೂಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಲಾಯಿತು. ಆದರೆ ಬ್ರಿಗೇಡ್ ನ ಬೆಂಬಲ ಬೇಡ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಹೋಳಿ ನಂತರ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ? ಬಂಗಾಳ ಚುನಾವಣೆಗೆ ಬಿಜೆಪಿ ಸಿದ್ಧತೆ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

SCROLL FOR NEXT