ಸಿದ್ದರಾಮಯ್ಯ 
ರಾಜಕೀಯ

ಜನತಾ ಪರಿವಾರದಿಂದ ಹೊರಬಂದ ನಂತರ ನಾನು ಆಡ್ವಾಣಿಯನ್ನು ಭೇಟಿ ಮಾಡಲೇ ಇಲ್ಲ: ಸಿದ್ದರಾಮಯ್ಯ

ಜನತಾ ಪರಿವಾರದಲ್ಲಿದ್ದಾಗ ನಾನು ಬಿಜೆಪಿ ಹಿರಿಯ ಮುಖಂಡ ಆಡ್ವಾಣಿ ಅವರ ಜೊತೆ ಮಾತನಾಡಿದ್ದು, ಜನತಾ ಪರಿವಾರದಿಂದ ಹೊರ ಬಂದ ನಂತರ ನಾನು ...

ಮೈಸೂರು: ಜನತಾ ಪರಿವಾರದಲ್ಲಿದ್ದಾಗ ನಾನು ಬಿಜೆಪಿ ಹಿರಿಯ ಮುಖಂಡ ಆಡ್ವಾಣಿ ಅವರ ಜೊತೆ ಮಾತನಾಡಿದ್ದು, ಜನತಾ ಪರಿವಾರದಿಂದ ಹೊರ ಬಂದ ನಂತರ ನಾನು ಅಡ್ವಾಣಿ ಅವರನ್ನು ಭೇಟಿ ಮಾಡಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಮಾಜಿ ಶ್ರೀನಿವಾಸ್ ಪ್ರಸಾದ್ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಂಜನಗೂಡಿನ ಬಗ್ಗೆ ಪೂಜಾರಿಗೆ ಏನು ಗೊತ್ತಿಲ್ಲ, ನಾನು ಅವರನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದರು.

ರಾಜ್ಯ ಬಜೆಟ್ ಅಧಿವೇಶನ ಫೆಬ್ರವರಿಯಲ್ಲಿ ಆರಂಭವಾಗಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಾಗುತ್ತದೆ. ಜನವರಿಯಿಂದ ರಾಜ್ಯದ ಆದಾಯ ಹೆಚ್ಚಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ 4,700 ಕೋಟಿ ರು. ಅನುದಾನ ನೀಡುವಂತೆ ಪ್ರಸ್ತಾವನೆ  ಜೊತೆಗೆ 386 ಕೋಟು ರು, ಪ್ರವಾಹ ಪರಿಹಾರಕ್ಕಾಗಿ ನೀಡುವಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ಮಹಾದಾಯಿ ನೀರು ಹಂಚಿಕೆ ವಿಷಯದಲ್ಲಿ ಪ್ರಧಾನಿ ಮದ್ಯ ಪ್ರವೇಶಿಸುವಂತೆ ಕೋರುವುದರ ಜೊತೆಗೆ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಕೋರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT