ಜೆಡಿಎಸ್ ಮುಖಂಡ ಪಿಜಿಆರ್ ಸಿಂಧ್ಯ (ಸಂಗ್ರಹ ಚಿತ್ರ) 
ರಾಜಕೀಯ

ಜೆಡಿಎಸ್ ತೊರೆಯುತ್ತಾರೆಯೇ ಪಿಜಿಆರ್ ಸಿಂಧ್ಯಾ..?

ಜೆಡಿಎಸ್ ಪರಿವಾರದ ಪ್ರಮುಖ ಮತ್ತು ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯ ಸದ್ಯದಲ್ಲಿಯೇ ಪಕ್ಷ ತೊರೆಯಲಿದ್ದು, ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ...

ರಾಮನಗರ: ಜೆಡಿಎಸ್ ಪರಿವಾರದ ಪ್ರಮುಖ ಮತ್ತು ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯ ಸದ್ಯದಲ್ಲಿಯೇ ಪಕ್ಷ ತೊರೆಯಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಕಾಂಗ್ರೆಸ್  ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಶನಿವಾರ ಕನಕಪುರದ ಬೋಳಾರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಸಿಂಧ್ಯ ಪಾಲ್ಗೊಂಡಿದ್ದು, ಊಹಾಪೋಹಗಳಿಗೆ ಮತ್ತಷ್ಟು ಆಸ್ಪದ  ನೀಡಿದಂತಾಗಿದೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಿಂಧ್ಯ ತಮ್ಮ ಒಂದು ಕಾಲದ ಎದುರಾಳಿ ಮತ್ತು ಹಾಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.  ಅಲ್ಲದೆ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡುವ ಮೂಲಕ ಸಿಂಧ್ಯ ಜೆಡಿಎಸ್‌ನಿಂದ ದೂರವಾಗುವ ಸೂಚನೆ ನೀಡಿದ್ದಾರೆ ಎಂದು  ಹೇಳಲಾಗುತ್ತಿದೆ.

ಜನತಾ ಪರಿವಾರದಲ್ಲಿ ಗುರುತಿಸಿಕೊಂಡು ಬಿಎಸ್‌ಪಿಗೆ ಸೇರ್ಪಡೆಯಾಗಿ, ಮತ್ತೆ ಜೆಡಿಎಸ್‌ಗೆ ಬಂದಿದ್ದ ಸಿಂಧ್ಯ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಲ್ಲಿ ಡಿ.ಕೆ.  ಶಿವಕುಮಾರ್ ವಿರುದ್ಧ  ಸ್ಪರ್ಧಿಸಿ ಸೋತಿದ್ದರು. ಆ ಬಳಿಕ ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದ, ಸಿಂಧ್ಯ ಇದೇ ಮೊದಲ ಬಾರಿಗೆ ರಾಜಕೀಯ ಕಾರ್ಯಕ್ರಮವೊಂದರಲ್ಲಿ  ಕಾಣಿಸಿಕೊಂಡಿದ್ದಾರೆ. ಅದೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕ್ರಮದಲ್ಲಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT