ಸಚಿವ ಮಹದೇವಪ್ಪ (ಸಂಗ್ರಹ ಚಿತ್ರ) 
ರಾಜಕೀಯ

ಅನ್ಸಾರಿ ಕಾಂಗ್ರೆಸ್ ಸೇರುವ ಪ್ರಸ್ತಾವನೆ ಇಲ್ಲ: ಎಚ್.ಸಿ. ಮಹದೇವಪ್ಪ

ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದ್ದಿರುವಂತೆಯೇ ಭಿನ್ನಮತೀಯ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳನ್ನು ಕಾಂಗ್ರೆಸ್ ತಳ್ಳಿಹಾಕಿದ್ದು, ಅಂತಹ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ..

ರಾಯಚೂರು: ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದ್ದಿರುವಂತೆಯೇ ಭಿನ್ನಮತೀಯ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳನ್ನು ಕಾಂಗ್ರೆಸ್ ತಳ್ಳಿಹಾಕಿದ್ದು, ಅಂತಹ  ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಸಚಿವ ಎಚ್ ಸಿ ಮಹದೇವಪ್ಪ ಅವರು, ಜೆಡಿಎಸ್ ಶಾಸಕರಾದ ಜಮೀರ್ ಅಹಮದ್ ಹಾಗೂ ಇಕ್ಬಾಲ್ ಅನ್ಸಾರಿ ಅವರನ್ನು ಕಾಂಗ್ರೆಸ್‌ಗೆ  ಸೇರಿಸಿಕೊಳ್ಳುವ ಪ್ರಸ್ತಾವನೆ ಹೈಕಮಾಂಡ್ ಮುಂದಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಜೆಡಿಎಸ್ ರಾಜ್ಯಾಧ್ಯ ಎಚ್ ಡಿ ಕುಮಾರಸ್ವಾಮಿ ಅವರು, ಉಪ ಚುನಾವಣೆ ಪ್ರಚಾರಕ್ಕೆ ಬರುವ ಸಚಿವರು  ಹಣದ ಚೀಲ ಇಟ್ಟುಕೊಂಡು ಬಂದಿದ್ದಾರೆ ಎಂದು  ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಿದರು. "ಇಂಥ ಕೆಲಸವನ್ನು ಕುಮಾರಸ್ವಾಮಿ ಮಾಡಿದ್ದರಿಂದ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ಅವರ  ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಮಹದೇವಪ್ಪ ಹೇಳಿದರು.

ಜಮೀರ್ ಪರ ಬೆಂಬಲಿಗರ ಬ್ಯಾಟಿಂಗ್
ಶಾಸಕ ಜಮೀರ್ ಅಹಮದ್ ಖಾನ್ ಮೀರ್‌ಸಾಧಿಕ್ ಇದ್ದಂತೆ ಎಂಬ ಅರ್ಥದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ನೀಡಿರುವ ಹೇಳಿಕೆ ಖಂಡಿಸಿ ಚಾಮರಾಜಪೇಟೆಯಲ್ಲಿ ಹಲವು ಮುಸ್ಲಿಂ  ಮುಖಂಡರು ಪ್ರತಿಭಟನೆ ನಡೆಸಿದರು. ಜೆಡಿಎಸ್ ಬೆಳವಣಿಗೆಗೆ ಜಮೀರ್ ಶ್ರಮಿಸುತ್ತಿದ್ದಾರೆ. ಅವರ ವಿರುದ್ಧ ವರಿಷ್ಠರು ಹೇಳಿಕೆ ನೀಡುವುದು ಸರಿಯಲ್ಲ ಎಂದು ಟೀಕಿಸಿದರು.\

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT