ಜನಾರ್ಧನ ಪೂಜಾರಿ 
ರಾಜಕೀಯ

ಸಿಎಂ ಸಿದ್ದರಾಮಯ್ಯ ವಾಚ್ ಹರಾಜು ಹಾಕಬೇಕು: ಪೂಜಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರು.60 ಲಕ್ಷ ಬೆಲೆ ಬಾಳುವ ವಾಚನ್ನು ಹರಾಜು ಹಾಕಿ, ಅದರಿಂದ ಬಂದ ಹಣವನ್ನು...

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರು.60 ಲಕ್ಷ ಬೆಲೆ ಬಾಳುವ ವಾಚನ್ನು ಹರಾಜು ಹಾಕಿ, ಅದರಿಂದ ಬಂದ ಹಣವನ್ನು ಯೋಧರ ಕುಟುಂಬಕ್ಕೆ ದಾನ ಮಾಡಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಸಲಹೆ ನೀಡಿದ್ದಾರೆ.
ನಿಮಗೆ ಕೈ ಗಡಿಯಾರವನ್ನು ಏಕೆ ಉಡುಗೊರೆಯಾಗಿ ಕೊಟ್ಟರೋ ಎಂಬುದು ನನಗೆ ತಿಳಿದಿಲ್ಲ. ಆದರೆ, ರು.60 ಲಕ್ಷ ಮೌಲ್ಯದ ಕೈಗಡಿಯಾರವನ್ನು ಉಡುಗೊರೆಯಾಗಿ ಪಡೆಯುವ ಮೂಲಕ ಸಿದ್ದರಾಮಯ್ಯ ಪ್ರಾಮಾಣಿಕತೆಗೆ ಧಕ್ಕೆ ಆದಂತಾಗಿದೆ. ಅಷ್ಟೇ ಅಲ್ಲದೇ, ಪಕ್ಷಕ್ಕೂ ಮುಜುಗರವನ್ನುಂಟು ಮಾಡಿದೆ. ಹಾಗಾಗಿ, ನಿಮ್ಮ ಕೈಗಡಿಯಾರವನ್ನು ಹರಾಜು ಹಾಕಿ, ಅದರಲ್ಲಿ ಬಂದ ಹಣವನ್ನು ಮೃತ ಯೋಧರ ಕುಟುಂಬಕ್ಕೆ ನೀಡಿ ಸಹಾಯ ಮಾಡಿ ಎಂದು ಅವರು ಹೇಳಿದ್ದಾರೆ.
ಅಭಿವೃದ್ಧಿ ಕೆಲಸಗಳನ್ನು ನೋಡಿಕೊಳ್ಳುವುದೇ ಮುಖ್ಯಮಂತ್ರಿಗಳ ಕೆಲಸ. ಆದರೆ, ಇಂತಹ ದುಬಾರಿ ವಾಚ್ ಕಟ್ಟಿಕೊಂಡು ಪಕ್ಷಕ್ಕೆ ಮುಜುಗರ ತರವುದು ಸರಿಯಲ್ಲ. ಪ್ರಾಮಾಣಿಕ ರಾಜಕೀಯ ವ್ಯಕ್ತಿ ಎಂದು ಸಿದ್ದರಾಮಯ್ಯ ಕರೆಸಿಕೊಂಡಿದ್ದಾರೆ. ವಾಚ್ ವಿವಾದದ ಸಲುವಾಗಿ ಹೆಸರು ಹಾಳಾಗಿ ಹೋಗುವುದು ಸರಿಯಲ್ಲ ಎಂದು ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT