ಜನಾರ್ಧನ ಪೂಜಾರಿ 
ರಾಜಕೀಯ

ಸಿಎಂ ಸಿದ್ದರಾಮಯ್ಯ ವಾಚ್ ಹರಾಜು ಹಾಕಬೇಕು: ಪೂಜಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರು.60 ಲಕ್ಷ ಬೆಲೆ ಬಾಳುವ ವಾಚನ್ನು ಹರಾಜು ಹಾಕಿ, ಅದರಿಂದ ಬಂದ ಹಣವನ್ನು...

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರು.60 ಲಕ್ಷ ಬೆಲೆ ಬಾಳುವ ವಾಚನ್ನು ಹರಾಜು ಹಾಕಿ, ಅದರಿಂದ ಬಂದ ಹಣವನ್ನು ಯೋಧರ ಕುಟುಂಬಕ್ಕೆ ದಾನ ಮಾಡಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಸಲಹೆ ನೀಡಿದ್ದಾರೆ.
ನಿಮಗೆ ಕೈ ಗಡಿಯಾರವನ್ನು ಏಕೆ ಉಡುಗೊರೆಯಾಗಿ ಕೊಟ್ಟರೋ ಎಂಬುದು ನನಗೆ ತಿಳಿದಿಲ್ಲ. ಆದರೆ, ರು.60 ಲಕ್ಷ ಮೌಲ್ಯದ ಕೈಗಡಿಯಾರವನ್ನು ಉಡುಗೊರೆಯಾಗಿ ಪಡೆಯುವ ಮೂಲಕ ಸಿದ್ದರಾಮಯ್ಯ ಪ್ರಾಮಾಣಿಕತೆಗೆ ಧಕ್ಕೆ ಆದಂತಾಗಿದೆ. ಅಷ್ಟೇ ಅಲ್ಲದೇ, ಪಕ್ಷಕ್ಕೂ ಮುಜುಗರವನ್ನುಂಟು ಮಾಡಿದೆ. ಹಾಗಾಗಿ, ನಿಮ್ಮ ಕೈಗಡಿಯಾರವನ್ನು ಹರಾಜು ಹಾಕಿ, ಅದರಲ್ಲಿ ಬಂದ ಹಣವನ್ನು ಮೃತ ಯೋಧರ ಕುಟುಂಬಕ್ಕೆ ನೀಡಿ ಸಹಾಯ ಮಾಡಿ ಎಂದು ಅವರು ಹೇಳಿದ್ದಾರೆ.
ಅಭಿವೃದ್ಧಿ ಕೆಲಸಗಳನ್ನು ನೋಡಿಕೊಳ್ಳುವುದೇ ಮುಖ್ಯಮಂತ್ರಿಗಳ ಕೆಲಸ. ಆದರೆ, ಇಂತಹ ದುಬಾರಿ ವಾಚ್ ಕಟ್ಟಿಕೊಂಡು ಪಕ್ಷಕ್ಕೆ ಮುಜುಗರ ತರವುದು ಸರಿಯಲ್ಲ. ಪ್ರಾಮಾಣಿಕ ರಾಜಕೀಯ ವ್ಯಕ್ತಿ ಎಂದು ಸಿದ್ದರಾಮಯ್ಯ ಕರೆಸಿಕೊಂಡಿದ್ದಾರೆ. ವಾಚ್ ವಿವಾದದ ಸಲುವಾಗಿ ಹೆಸರು ಹಾಳಾಗಿ ಹೋಗುವುದು ಸರಿಯಲ್ಲ ಎಂದು ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT