ರಮ್ಯಾ 
ರಾಜಕೀಯ

ನಿಮಗೆ ಏನಾದರೂ ಸಮಸ್ಯೆ ಇದ್ದರೆ ನನಗೆ ಕರೆ ಮಾಡಿ: ಮಾಜಿ ಸಂಸದೆ ರಮ್ಯಾ

ನಿಮಗೆ ಏನಾದರೂ ಸಮಸ್ಯೆ ಇದ್ದರೆ ನನ್ನ ಮೊಬೈಲ್ ನಂಬರ್ ಗೆ ಮಿಸ್ ಕಾಲ್ಡ್ ಕೊಡಿ, ನಾನು ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇನೆ. ಎಲ್ಲರೂ, ನನ್ನ ನಂಬರ್ ಸೇವ್ ಮಾಡಿಕೊಳ್ಳಿ ...

ಪಾಂಡವಪುರ (ಮಂಡ್ಯ): ನಿಮಗೆ ಏನಾದರೂ ಸಮಸ್ಯೆ ಇದ್ದರೆ ನನ್ನ ಮೊಬೈಲ್ ಸಂಖ್ಯೆಗೆ ಮಿಸ್ ಕಾಲ್ಡ್ ಕೊಡಿ, ನಾನು ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇನೆ. ಎಲ್ಲರೂ, ನನ್ನ ನಂಬರ್ ಸೇವ್ ಮಾಡಿಕೊಳ್ಳಿ ಎಂದು ಮಾಜಿ ಸಂಸದೆ ರಮ್ಯಾ ತಮ್ಮ ಕ್ಷೇತ್ರದ ಜನರಿಗೆ ತಮ್ಮ ಮೊಬೈಲ್ ಸಂಖ್ಯೆ ನೀಡಿದ್ದಾರೆ.

ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರಿನಲ್ಲಿ ಜಿಪಂ ಮತ್ತು ತಾಪಂ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದ ಅವರು, ಸಾರ್ವಜನಿಕರಿಗೆ ತೊಂದರೆಯಾದರೆ ಮಿಸ್ ಕಾಲ್ಡ್ ಕೊಡಿ. ಕೂಡಲೇ ಆ ನಂಬರ್​ನಿಂದ ನಿಮಗೆ ಸಂದೇಶ ಬರುತ್ತದೆ’ ಎಂದು ಹೇಳಿದರು.

ಈಗಾಗಲೇ ಮಂಡ್ಯದಲ್ಲಿ ಕಚೇರಿ ನೋಡಲಾಗಿದೆ. ಜಿಪಂ ಮತ್ತು ತಾಪಂ ಚುನಾವಣೆ ಮುಗಿಯುವ ತನಕ ಮಂಡ್ಯದಲ್ಲಿಯೇ ಇದ್ದು, ಎಲ್ಲ ತಾಲೂಕುಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದರು. ಇದರಿಂದ ತಮ್ಮ ದೂರವಾಣಿ ಸಂಖ್ಯೆ ನೀಡುವ ಮೂಲಕ ಜಿಲ್ಲೆಯ ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯವಾಗುವ ಸುಳಿವನ್ನು ರಮ್ಯಾ ನೀಡಿದಂತಾಗಿದೆ.

ಇನ್ನು ಮೊಬೈಲ್ ಸಂಖ್ಯೆ ನೀಡಿದ ಕೂಡಲೇ ಸಾರ್ವಜನಿಕರು ಮಿಸ್ ಕಾಲ್ಡ್ ಕೊಡಲು ಪ್ರಾರಂಭಿಸಿದರು. ಕೂಡಲೇ ಕರೆ ಮಾಡಿದವರಿಗೆ ‘ಕರೆ ಮಾಡಿದ್ದಕ್ಕೆ ಧನ್ಯವಾದಗಳು. ನಾನು ನಿಮ್ಮ ಜತೆ ನಿರಂತರ ಸಂಪರ್ಕದಲ್ಲಿರುತ್ತೇನೆ. ನಿಮ್ಮ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಕರೆ ಮಾಡುತ್ತೇವೆ’ ಎಂಬ ಮುದ್ರಿತ ಸಂದೇಶ ಕೇಳಿ ಜನ ದಂಗಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT