ಎಚ್. ಡಿ ದೇವೇಗೌಡ 
ರಾಜಕೀಯ

ಮೂರು ಕ್ಷೇತ್ರಗಳಲ್ಲೂ ಠೇವಣಿ ಕಳೆದುಕೊಂಡ ಜೆಡಿಎಸ್!

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಳ್ಳುವ ಮೂಲಕ ಮೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ಹೀನಾಯವಾದ ಸೋಲು ಅನುಭವಿಸಿದೆ....

ಬೆಂಗಳೂರು: ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಪ್ರತಿಷ್ಠೆಯ ಕಣವಾಗಿದ್ದ ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ನಗು ಬೀರಿದ್ದು, ಮೂರು ಕ್ಷೇತ್ರಗಳಲ್ಲಿ ಎರಡು ಬಿಜೆಪಿ ಹಾಗೂ ಒಂದು ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಜೆಡಿಎಸ್ ಎಲ್ಲೂ ಖಾತೆ ತೆರೆಯದೆ ವಿಫಲವಾಗಿದೆ.

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಳ್ಳುವ ಮೂಲಕ ಮೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ಹೀನಾಯವಾದ ಸೋಲು ಅನುಭವಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆಗೆ ಮಣೆ ಹಾಕದ ಮತದಾರ, ಜೆಡಿಎಸ್ ಅಭ್ಯರ್ಥಿಗಳನ್ನು ಠೇವಣಿ ಇಲ್ಲದಂತೆ ಸೋಲಿಸಿದ್ದಾರೆ.

ಹೆಬ್ಬಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಇಸ್ಮಾಯಿಲ್ ಷರೀಫ್ ಕೇವಲ 3,666 ಮತ ಗಳಿಸಿದ್ದರೆ, ಬೀದರ್ ನಲ್ಲಿ ಅಯಾಜ್ ಖಾನ್ 4, 421 ಹಾಗೂ ದೇವದುರ್ಗದಲ್ಲಿ ಕರಿಯಮ್ಮ 9, 156 ಮತಗಳನ್ನ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT