ರಮ್ಯಾ 
ರಾಜಕೀಯ

ಮಾಜಿ ಸಂಸದೆ ರಮ್ಯಾ ಕಾಲ್ಗುಣ ಸರಿಯಿಲ್ಲ: ಎಚ್ ಡಿಕೆ ಲೇವಡಿ

ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಕಾಲ್ಗುಣ ಸರಿಯಿಲ್ಲ, ಅವರು ಮಂಡ್ಯಕ್ಕೆ ಕಾಲಿಟ್ಟ ನಂತರ ರೈತರು ನಿರಂತರವಾಗಿ ಸಾವನ್ನಪ್ಪುತ್ತಿದ್ದಾರೆ...

ಮಂಡ್ಯ:  ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಕಾಲ್ಗುಣ ಸರಿಯಿಲ್ಲ, ಅವರು ಮಂಡ್ಯಕ್ಕೆ ಕಾಲಿಟ್ಟ ನಂತರ ರೈತರು ನಿರಂತರವಾಗಿ ಸಾವನ್ನಪ್ಪುತ್ತಿದ್ದಾರೆ ಎಂದು ಕುಮಾರಸ್ವಾಮಿ ರಮ್ಯಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕೆ ಆರ್ ಪೇಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ರಮ್ಯಾ ಅವರು ಕಾಲಿಟ್ಟ ನಂತರ ಮಂಡ್ಯದಲ್ಲಿ ನೂರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ರಮ್ಯಾ ಕಾಲಿಟ್ಟ ನಂತರ ರೈತರು ಆತ್ಮಹತ್ಯೆಯ ಸರಣಿ ಇಲ್ಲಿ ಆರಂಭವಾಯಿತು. ಇದು ಈ ಕ್ಷೇತ್ರದ ಜನತೆಗೆ ರಮ್ಯಾ ಕೊಟ್ಟ ಬಳುವಳಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಚುನಾವಣೆಯ ಸಮಯದಲ್ಲಿ ಬಂದು ರೈತರ ಕಷ್ಟ ಸುಖ ವಿಚಾರಿಸುವುದು ಇದು ಯಾವ ರೀತಿಯ ರಾಜಕೀಯ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ನಿರಂತರವಾಗಿ ರೈತರ ಪರವಾದ ಹೋರಾಟ ಮಾಡುತ್ತಲೇ ಬರುತ್ತಿದೆ. ಇದರ ಅರಿವು ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ತಿಳಿಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT