ಮಂಡ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಮಾಜಿ ಸಂಸದೆ ರಮ್ಯಾ 
ರಾಜಕೀಯ

ಕುಮಾರಸ್ವಾಮಿ ಪತ್ನಿ ನಟಿಯಲ್ಲವೆ? ಮಾಜಿ ಸಂಸದೆ ರಮ್ಯಾ ಪ್ರಶ್ನೆ

ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ಕಾಲ್ಗುಣ ಸರಿಯಿಲ್ಲ. ಅವರು ಸಿನಿಮಾ ನಟಿ, ಅವರನ್ನು ಮತದಾರರು ನಂಬಬಾರದು ಎಂದು ಹೇಳಿಕೆ...

ಮಂಡ್ಯ: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ಕಾಲ್ಗುಣ ಸರಿಯಿಲ್ಲ. ಅವರು ಸಿನಿಮಾ ನಟಿ, ಅವರನ್ನು ಮತದಾರರು ನಂಬಬಾರದು ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರಿಗೆ ರಮ್ಯಾ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್ .ಪೇಟೆ ತಾಲ್ಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಸ್ವತಃ ನಿರ್ಮಾಪಕರು. ಅವರ ಪತ್ನಿ ಸಿನಿಮಾ ನಟಿ. ಈಗಲೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ಮಗ ಕೂಡ ಹೀರೋ ಆಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದನ್ನು ಮೊದಲು ಅರ್ಥ ಮಾಡಿಕೊಳ್ಳಲಿ. ಅದನ್ನು ಬಿಟ್ಟು ಬೇರೆಯವರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

ಕುಮಾರಸ್ವಾಮಿಯವರ ಪತ್ನಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಎಂದು ಕೇಳಿದಾಗ ನಿಮಗೆ ಗೊತ್ತಿಲ್ಲವೇ, ಅವರ ಹೆಂಡತಿ ರಾಧಿಕಾ ಸಿನಿಮಾದಲ್ಲಿ ನಟಿಸುತ್ತಿಲ್ಲವೇ ಎಂದು ಮರುಪ್ರಶ್ನೆ ಹಾಕಿದರು.

ಮಂಡ್ಯ ಜಿಲ್ಲೆಗೆ ನಾನು ಕಾಲಿಟ್ಟ ಮೇಲೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಮಾರಸ್ವಾಮಿಯವರು ಹೇಳಿದ್ದು ನನಗೆ ತೀವ್ರ ಬೇಸರವನ್ನುಂಟುಮಾಡಿದೆ. ರೈತರ ಆತ್ಮಹತ್ಯೆ ವಿಷಯವನ್ನು ರಾಜಕೀಯಕ್ಕೆ ಎಳೆದು ತರುವುದು ತಪ್ಪು. ಅವರಂತೆ ನಾನು ಚಿಲ್ಲರೆ ರಾಜಕೀಯ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ನಾನು ಜೆಡಿಎಸ್ ಪಕ್ಷವನ್ನು ಮೂಲೆಗುಂಪು ಮಾಡುತ್ತೇನೆ ಎಂಬ ಭಯದಲ್ಲಿ ಸಂಸದ ಪುಟ್ಟರಾಜು ಅವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ರಮ್ಯ ಅವರ ಆಟ ನಡೆಯೋದಿಲ್ಲ ಎಂಬ ಹೇಳಿಕೆಯಲ್ಲಿಯೇ ಅವರಿಗೆ ನನ್ನ ಮೇಲೆ ಇರುವ ಭಯ ಗೊತ್ತಾಗುತ್ತದೆ. ಈ ಭಯ ಇದೀಗ ಮಾಜಿ ಮುಖ್ಯಮಂತ್ರಿಗಳಿಗೂ ಬಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದೆ ಎಂದು ರಮ್ಯಾ ಕುಟುಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT