ರಮ್ಯಾ, ಎಚ್ ಡಿ ಕುಮಾರ ಸ್ವಾಮಿ ಮತ್ತು ದೇವೇಗೌಡ, 
ರಾಜಕೀಯ

ಮೌನ ಮುರಿದ ದೊಡ್ಡಗೌಡರು, ರಮ್ಯಾ ಎಚ್ ಡಿಕೆ ವಾಕ್ಸಮರಕ್ಕೆ ಎಚ್ ಡಿಡಿ ಎಂಟ್ರಿ

ವಾಚ್ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ರಮ್ಯಾ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಹೇಳಿದ್ದಾರೆ. ..

ಹಾಸನ:  ಸಿಎಂ ಸಿದ್ದರಾಮಯ್ಯ ಅವರ ವಾಚ್ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ರಮ್ಯಾ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಹೇಳಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಎಚ್.ಡಿ.ದೇವೇಗೌಡರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಚ್ ಪ್ರಕರಣಕ್ಕಿಂತ ರಮ್ಯಾ ಅವರ ವಿಚಾರ ದೊಡ್ಡ ವಿಷಯವಲ್ಲ' ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಚ್ ಪ್ರಕರಣದ ಕುರಿತ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ರಮ್ಯಾ ಅವರ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ. ನಾನು ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದಿಲ್ಲ' ಎಂದು ಹೇಳಿದರು.

ನಾನು ಯಾರ ಬಗ್ಗಯೂ ಹಗುರವಾಗಿ ಮಾತನಾಡುವುದಿಲ್ಲ. ಅದರಲ್ಲೂ ಆ ಹೆಣ್ಣುಮಗಳ ಬಗ್ಗೆಯಂತೂ ಮಾತನಾಡುವುದೇ ಇಲ್ಲ. ನನ್ನ ಬಗ್ಗೆ ಈಗಾಗಲೇ ಹಲವರು ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ದೇವೇಗೌಡರು ತಿಳಿಸಿದರು. ನನ್ನ ಕುಟುಂಬವನ್ನು ಮಾತ್ರ ರಾಜಕೀಯವಾಗಿ ಬೆಳೆಸಬೇಕೆಂದಿದ್ದರೆ ಜಿ.ಪುಟ್ಟಸ್ವಾಮಿ ಗೌಡರನ್ನು, ದೊಡ್ಡೇಗೌಡರನ್ನು ಎಂಎಲ್‌ಸಿ ಮಾಡುತ್ತಿರಲಿಲ್ಲ. ಆಗ ಯಾರು ಅವರ ಜೊತೆ ಇದ್ದರು. ಹಿಂದಿನದನ್ನು ನೆನೆಪು ಮಾಡಿಕೊಳ್ಳಿ' ಎಂದು ಗೌಡರು ಸಲಹೆ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT