ರಮ್ಯಾ, ಎಚ್ ಡಿ ಕುಮಾರ ಸ್ವಾಮಿ ಮತ್ತು ದೇವೇಗೌಡ, 
ರಾಜಕೀಯ

ಮೌನ ಮುರಿದ ದೊಡ್ಡಗೌಡರು, ರಮ್ಯಾ ಎಚ್ ಡಿಕೆ ವಾಕ್ಸಮರಕ್ಕೆ ಎಚ್ ಡಿಡಿ ಎಂಟ್ರಿ

ವಾಚ್ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ರಮ್ಯಾ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಹೇಳಿದ್ದಾರೆ. ..

ಹಾಸನ:  ಸಿಎಂ ಸಿದ್ದರಾಮಯ್ಯ ಅವರ ವಾಚ್ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ರಮ್ಯಾ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಹೇಳಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಎಚ್.ಡಿ.ದೇವೇಗೌಡರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಚ್ ಪ್ರಕರಣಕ್ಕಿಂತ ರಮ್ಯಾ ಅವರ ವಿಚಾರ ದೊಡ್ಡ ವಿಷಯವಲ್ಲ' ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಚ್ ಪ್ರಕರಣದ ಕುರಿತ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ರಮ್ಯಾ ಅವರ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ. ನಾನು ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದಿಲ್ಲ' ಎಂದು ಹೇಳಿದರು.

ನಾನು ಯಾರ ಬಗ್ಗಯೂ ಹಗುರವಾಗಿ ಮಾತನಾಡುವುದಿಲ್ಲ. ಅದರಲ್ಲೂ ಆ ಹೆಣ್ಣುಮಗಳ ಬಗ್ಗೆಯಂತೂ ಮಾತನಾಡುವುದೇ ಇಲ್ಲ. ನನ್ನ ಬಗ್ಗೆ ಈಗಾಗಲೇ ಹಲವರು ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ದೇವೇಗೌಡರು ತಿಳಿಸಿದರು. ನನ್ನ ಕುಟುಂಬವನ್ನು ಮಾತ್ರ ರಾಜಕೀಯವಾಗಿ ಬೆಳೆಸಬೇಕೆಂದಿದ್ದರೆ ಜಿ.ಪುಟ್ಟಸ್ವಾಮಿ ಗೌಡರನ್ನು, ದೊಡ್ಡೇಗೌಡರನ್ನು ಎಂಎಲ್‌ಸಿ ಮಾಡುತ್ತಿರಲಿಲ್ಲ. ಆಗ ಯಾರು ಅವರ ಜೊತೆ ಇದ್ದರು. ಹಿಂದಿನದನ್ನು ನೆನೆಪು ಮಾಡಿಕೊಳ್ಳಿ' ಎಂದು ಗೌಡರು ಸಲಹೆ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT