ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ 
ರಾಜಕೀಯ

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ ಕುಮಾರಸ್ವಾಮಿಗೆ ಹೊಟ್ಟೆ ಕಿಚ್ಚು: ಸಿಎಂ ಸಿದ್ದರಾಮಯ್ಯ

ನಾನು ಸಿಎಂ ಆಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರ ಸ್ವಾಮಿ ಅವರಿಗೆ ಹೊಟ್ಟೆಕಿಚ್ಚು, ನಾನು ಮುಖ್ಯಮಂತ್ರಿ ಆಗಿರುವುದನ್ನು ಅವರಿಗೆ ...

ಬೆಂಗಳೂರು: ನಾನು ಸಿಎಂ ಆಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರ ಸ್ವಾಮಿ ಅವರಿಗೆ ಹೊಟ್ಟೆಕಿಚ್ಚು, ನಾನು ಮುಖ್ಯಮಂತ್ರಿ ಆಗಿರುವುದನ್ನು ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ಈ ರಾಜ್ಯದಲ್ಲಿ ಹಿಂದುಳಿದವರು ಮುಖ್ಯಮಂತ್ರಿ ಆಗುವುದನ್ನ ಸಹಿಸಲ್ಲ, ವೀರಪ್ಪ ಮೊಯ್ಲಿ, ಬಂಗಾರಪ್ಪ ಎಷ್ಟು ವರ್ಷ ಸಿಎಂ ಆಗಿದ್ದರು ಎಂದು ಪ್ರಶ್ನಿಸಿದ ಅವರು, ಇದು ಹಿಂದಿನಿಂದಲೂ ಹೀಗೆಯೇ ನಡೆದುಕೊಂಡು ಬಂದಿದೆ ಎಂದು ಹೇಳಿದರು. ನಾನು ಹಿಂದುಳಿದ ವರ್ಗಕ್ಕೆ ಸೇರಿದವನು ಎಂಬ ಕಾರಣಕ್ಕೆ ನನ್ನ ವಿರುದ್ಧ ಕುಮಾರ ಸ್ವಾಮಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ನಾನು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುವುದಿಲ್ಲ. ಯಾರಾದರೂ ಬೆಳ್ಳಿ ತಟ್ಟೆಯನ್ನು ಬ್ಯಾಗ್ ನಲ್ಲಿ ಇಟ್ಟುಕೊಂಡು ಓಡಾಡುತ್ತಾರಾ ಎಂದು ಪ್ರಶ್ನಿಸಿದ ಸಿಎಂ, ಕುಮಾರಸ್ವಾಮಿಗೆ ಬುದ್ದಿ ಇಲ್ಲ ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿ ಆರೋಪಗಳೆಲ್ಲಾ ನಿರಾಧಾರ ವಾಚ್ ಕಳೆದುಕೊಂಡ ಬಗ್ಗೆ ದೂರುದಾರ ಡಾ. ಸುಧಾಕರ್ ಶೆಟ್ಟಿ ಎಲ್ಲಿಯೀ ಏನನ್ನೂ ಹೇಳಿಲ್ಲ. ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಎಲ್ಲವನ್ನೂ ಕುಮಾರ ಸ್ವಾಮಿ ಅವರೇ ಮಾಡುತ್ತಿದ್ದಾರೆ ಎಂದು ದೂರಿದರು. ಇನ್ನು ಹೈ ಕಮಾಂಡ್ ಬಗ್ಗೆ ತಾವು ವಾಚ್ ವಿಷಯ ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT