ಜನಾರ್ಧನ ಪೂಜಾರಿ-ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಎಚ್ ಡಿ ಕುಮಾರಸ್ವಾಮಿ ಆರೋಪ ಬುಡವಿಲ್ಲದ್ದು: ಜನಾರ್ಧನ ಪೂಜಾರಿ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಡವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಡವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ ಜನಾರ್ಧನ ಪೂಜಾರಿ ಹೇಳಿದ್ದಾರೆ.
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತವಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯಕ್ಕಾಗಿ ಸಿದ್ದರಾಮಯ್ಯನವರ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಈಗಾಗಲೇ ಸಿಎಂ ಬಳಿ ಇರುವ ವಾಚು, ಕಳುವಾಗಿರುವ ತಮ್ಮ ವಾಚಲ್ಲ ಎಂದು ಡಾ.ಸುಧಾಕರ್ ಶೆಟ್ಟಿ ಸ್ಪಷ್ಟ ಪಡಿಸಿದ್ದಾರೆ. ಇಷ್ಟಾದರೂ, ಎಚ್ ಡಿ ಕುಮಾರಸ್ವಾಮಿ ಅವರು ಮಾತ್ರ ಸಿದ್ದರಾಮಯ್ಯ ಅವರಿಗೆ ನೀಡಿರುವ ವಾಚು ಕದ್ದದ್ದು ಎಂದು ಹೇಳುತ್ತಾರೆ. ಸ್ಪಷ್ಟನೇ ಕೊಟ್ಟಿದ್ದರೂ ರಾಜಕೀಯ ಲಾಭಕ್ಕೆ ಮತ್ತೆ ಅದೇ ಹೇಳಿಕೆಯನ್ನು ನೀಡುವುದು ಸರಿಯಲ್ಲ ಎಂದು ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. 
ಸಿದ್ದರಾಮಯ್ಯ ದುಬಾರಿ ಉಡುಗೊರೆಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳುವವರು, ಮೊದಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಲಿ, ದುಬಾರಿ ಉಡುಗೊರೆ ತೆಗೆದುಕೊಳ್ಳಬೇಡಿ ಎಂದು. ಪ್ರಧಾನಿ ನರೇಂದ್ರ ಮೋದಿ ಅವರೇ ರು.10 ಲಕ್ಷ ಮೌಲ್ಯದ ಸೂಟನ್ನು ಉಡುಗೊರೆಯನ್ನಾಗಿ ಪಡೆದಿದ್ದಾರೆ. ಹಾಗಾಗದರೆ, ಇಷ್ಟೋಂದು ದುಬಾರಿ ಉಡುಗೊರೆ ಏಕೆ ಪಡೆದರು ಎಂಬುದಕ್ಕೆ ಮೋದಿ ಉತ್ತರಿಸಬೇಕು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT