ಹೈಕೋರ್ಟ್ 
ರಾಜಕೀಯ

ಲೋಕಲ್ ಫೈಟ್‍ಗೆ ಹೈಕೋರ್ಟ್ ತಡೆ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ದಿನಾಂಕ ಪ್ರಕಟಣೆಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ...

ಕಲಬುರಗಿ/ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ದಿನಾಂಕ ಪ್ರಕಟಣೆಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. 
ಕಲಬುರಗಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಜಿಪಂ, ತಾಪಂ ಸ್ಥಾನಗಳ ಮೀಸಲಾತಿ ಯಲ್ಲಿ ಅನ್ಯಾಯವಾಗಿದೆ ಎಂದು ಸಲ್ಲಿಕೆಯಾಗಿದ್ದ ಅರ್ಜಿಗಳ ಸಂಬಂಧ ನ್ಯಾ. ರಾಮಮೋಹ ನ ರೆಡ್ಡಿ ಅವರಿದ್ದ ಪೀಠ ಈ ಆದೇಶ ನೀಡಿದೆ. ಅಲ್ಲದೆ, ರಾಜ್ಯ ಚುನಾವಣಾ ಆಯೋಗ ಹೊರಡಿ ಸಿರುವ ಮೀಸಲಾತಿ ಅಧಿಸೂಚನೆಗೂ ಅದು ತಡೆಯೊಡ್ಡಿದೆ. 
ಇದೇ ವೇಳೆ, ಬೆಂಗಳೂರಿನ ಹೈಕೋರ್ಟ್ ಪೀಠ ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚುನಾವಣೆ ಕುರಿತ ಗೊಂದಲಗಳಿಗೆ ಸಂಬಂಧಿಸಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡುವುದು ಸರಿಯಾದ ಕ್ರಮವಲ್ಲ ಎಂದಿತು. 
ಜಿ.ಪಂ. ಚುನಾವಣೆಯ ರೊಟೇಶನ್ ಮತ್ತು ಮೀಸಲು ನಿಗದಿ ಕುರಿತು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠಕ್ಕೆ ಚುನಾವಣಾ ದಿನಾಂಕ ಘೋಷಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಗುರುವಾರ ಮನವಿ ಮಾಡಿದರು. 
ಒಟ್ಟು 80 ಅರ್ಜಿಗಳು ಸಲ್ಲಿಕೆಯಾಗಿದ್ದು, ಬಹುತೇಕ ಎಲ್ಲದರಲ್ಲೂ ಸಂವಿಧಾನ ಬಾಹಿರ ಎಂದು ದೂರಲಾಗಿದೆ. ಅಲ್ಲದೆ ಈ ಮೀಸಲು ಸಂವಿಧಾನದ ಅನುಚ್ಛೇದ 243ಡಿಯ ಸಂಪೂರ್ಣ ವಿರುದ್ಧವಾಗಿದೆ. ಈ ಅನು ಚ್ಛೇದದ ಅನುಸಾರ ಪಂಚಾಯ್ತಿಯ ಎಲ್ಲ ಕ್ಷೇತ್ರಗಳಲ್ಲೂ ಪ್ರತಿ ಐದು ವರ್ಷಕ್ಕೊಮ್ಮೆ ಆವರ್ತನ ಆಗಬೇಕು. ಆದರೆ ಆಯೋಗವು ಸಂವಿಧಾನದ ಈ ಆಶಯಕ್ಕೆ ವಿರುದ್ಧವಾಗಿ ಪ್ರತಿ 10 ವರ್ಷಕ್ಕೊಮ್ಮೆ ಎಂದು ಆವರ್ತನ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT