ಸಿದ್ದರಾಮಯ್ಯ 
ರಾಜಕೀಯ

ರಾಜಕೀಯ ಕಾರಣಕ್ಕಾಗಿ ಪದೇ ಪದೇ ಬೆಳಗಾವಿ ವಿಚಾರವಾಗಿ ಖ್ಯಾತೆ: ಸಿಎಂ

ರಾಜ್ಯದಲ್ಲಿ ಗಡಿ ಕ್ಯಾತೆ ಮತ್ತೆ ಆರಂಭವಾಗಿದೆ. ಈ ಬಾರಿ ಶುರು ಮಾಡಿದ್ದು ಸ್ವತಃ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್...

ಬೆಳಗಾವಿ/ ಮಂಡ್ಯ: ರಾಜ್ಯದಲ್ಲಿ ಗಡಿ ಕ್ಯಾತೆ ಮತ್ತೆ ಆರಂಭವಾಗಿದೆ. ಈ ಬಾರಿ ಶುರು ಮಾಡಿದ್ದು ಸ್ವತಃ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್! ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ನಮ್ಮದೇ. ಕಟ್ಟ ಕಡೆಯ ಮರಾಠಿ ಭಾಷಿಕ ಜೀವಂತವಾಗಿರುವವರೆಗೆ ಬೆಳಗಾವಿ ಗಡಿ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ಇದಕ್ಕೆ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅದು ಮಹಾಜನ್ ವರದಿಯಲ್ಲೇ ನಿರ್ಧಾರವಾಗಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಗೇಟು ನೀಡಿದ್ದಾರೆ.

ಮಹಾ ಸರ್ಕಾರದ ಬೆಂಬಲವಿದೆ: ``ಬೆಳಗಾವಿ ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿದ್ದು, ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿರುವ ಮರಾಠಿ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವಂತೆ ಮರಾಠಿಗರು ನಡೆಸುತ್ತಿರುವ ಹೋರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಹಾಗೂ ಜನತೆಯ ಬೆಂಬಲವಿದೆ'' ಎಂದು ಮಹಾರಾಷ್ಟ್ರದ ಪುಣೆಯ ಪಿಂಪ್ರಿಯ ಚಿಂಚವಾಡದಲ್ಲಿ ಭಾನುವಾರ ನಡೆದ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಫಡ್ನವೀಸ್ ಹೇಳಿದ್ದಾರೆ. ಬೆಳಗಾವಿ ಮರಾಠಿಗರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ನಾವೆಲ್ಲರೂ ಮರಾಠಿಗರ ಸೇವಕರು. ಮರಾಠಿಗರ ಮೇಲಿನ ಅನ್ಯಾಯ, ದೌರ್ಜನ್ಯವನ್ನು ನಾವು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ಬಾಲ್ಕಿ ಮತ್ತಿತರ ಗಡಿಭಾಗದಲ್ಲಿರುವ ಮರಾಠಿ ಬಹುಭಾಷಿಕ ಪ್ರದೇಶಗಳೆಲ್ಲವೂ ಮಹಾರಾಷ್ಟ್ರದ ಅಂಗ. ಮಹಾರಾಷ್ಟ್ರ ಸರ್ಕಾರ ಗಡಿ ಮರಾಠಿಗರ ಬೆಂಗಾವಲಿಗಿದೆ.

ಗಡಿಭಾಗದಲ್ಲಿ ಒಬ್ಬ ಮರಾಠಿಗನಿದ್ದರೂ ಹೋರಾಟ ನಿಲ್ಲಲ್ಲ ಎಂದರು. ಗಡಿ ಪ್ರದೇಶ ಕರ್ನಾಟಕಕ್ಕೆ ಸೇರಿದ್ದರೂ ಈ ಪ್ರದೇಶದಲ್ಲಿರುವ ಮರಾಠಿ ಭಾಷಿಕರ ಮನಸ್ಥಿತಿ ಮರಾಠಿ ಹಾಗೂ ಮಹಾರಾಷ್ಟ್ರದ್ದೇ ಆಗಿದೆ. ಬೆಳಗಾವಿ ಗಡಿ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ವಿಧಾನಸಭೆಗೆ ಮಹಾರಾಷ್ಟ್ರ ಏಕೀಕರಣ ಸಮಿತಿ ಅಭ್ಯರ್ಥಿಗಳೇ ಆಂಯ್ಕೆಯಾಗುತ್ತಾ ಬಂದಿದ್ದಾರೆ. ಆದರೆ, ಬಹುತೇಕ ಗಡಿ ಪ್ರದೇಶ ಕರ್ನಾಟಕಕ್ಕೆ ಸೇರಿದೆ ಎಂದರು.

ಸಿಎಂ ತಿರುಗೇಟು: ``ಮಹಾರಾಷ್ಟ್ರದವರು ರಾಜಕೀಯ ಕಾರಣಕ್ಕಾಗಿ ಪದೇ ಪದೆ ಬೆಳಗಾವಿ ವಿಚಾರವಾಗಿ ಖ್ಯಾತೆ ತೆಗೆಯುತ್ತಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅದು ಮಹಾಜನ್ ವರದಿಯಲ್ಲಿ ನಿರ್ಧಾರವಾಗಿದೆ'' ಎಂದು ಮುಖ್ಯ-ಮಂತ್ರಿ ಸಿದ್ದರಾಮಯ್ಯ ಸೋಮವಾರ ಮಂಡ್ಯದಲ್ಲಿ ಕಿಡಿಕಾರಿದ್ದಾರೆ. ಜತೆಗೆ, ಬೆಳಗಾವಿ ವಿಷಯ ಈಗಾಗಲೇ ಇತ್ಯರ್ಥವಾಗಿದೆ. ಮಹಾರಾಷ್ಟ್ರದವರು ಎಷ್ಟೇ ರಾಜಕೀಯ ಮಾಡಿದರೂ ಬೆಳಗಾವಿ ನಮ್ಮದೇ ಎಂದು ಹೇಳಿದ್ದಾರೆ.

ಮರಾಠಿ ಟೈಗರ್ಸ್ ಬಿಡುಗಡೆ ಖಚಿತ
: ಕೊಲ್ಲೆ ವಿವಾದಾತ್ಮಕ ಮರಾಠಿ ಟೈಗರ್ಸ್ ಮರಾಠಿ ಚಲನಚಿತ್ರವನ್ನು ಫೆ.5ರಂದು ಮಹಾರಾಷ್ಟ್ರ ಸೇರಿದಂತೆ ಗಡಿ ಪ್ರದೇಶದಲ್ಲಿ ಬಿಡುಗಡೆ ಮಾಡಿಯೇ ತೀರುತ್ತೇವೆ ಎಂದು ಚಿತ್ರನಟ ಅಮೋಲ ಕೊಲ್ಲೆ ಹೇಳಿದ್ದಾರೆ. ವಿವಾದಾತ್ಮಕ
ಮರಾಠಿ ಟೈಗರ್ಸ್ ಚಿತ್ರ ನಿಷೇಧಿಸುವಂತೆ ಕನ್ನಡ ಸಂಘಟನೆಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ, ಬೆಳಗಾವಿಗೆ ಪ್ರಚಾರಕ್ಕೆ ಸೋಮವಾರ ಆಗಮಿಸಿದ ಚಿತ್ರ ತಂಡದ ಸದಸ್ಯರು ಈ ಹೇಳಿಕೆ ನೀಡಿದ್ದಾರೆ. ಗಡಿಭಾಗದಲ್ಲಿರುವ ಮರಾಠಿ ಭಾಷಿಕರು ಕಳೆದ 60 ವರ್ಷಗಳಿಂದ ಅನ್ಯಾಯ, ದೌರ್ಜನ್ಯ ಎದುರಿಸುತ್ತಿದ್ದಾರೆ. ಸೆನ್ಸಾರ್ ಮಂಡಳಿ ಅನುಮತಿ ನೀಡಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT