ಭೈರತಿ ಸುರೇಶ್ 
ರಾಜಕೀಯ

ಹೆಬ್ಬಾಳ ಉಪ ಚುನಾವಣೆ: ಭೈರತಿ ಸುರೇಶ್ ಬಿ ಫಾರಂಗೆ ಕಾಂಗ್ರೆಸ್ ಹೈಕಮಾಂಡ್ ತಡೆ

ಹೆಬ್ಬಾಳ ವಿಧಾನಸಭೆ ಉಪ ಚುನಾವಣೆ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಫ್ತ..

ಬೆಂಗಳೂರು: ಹೆಬ್ಬಾಳ ವಿಧಾನಸಭೆ ಉಪ ಚುನಾವಣೆ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಫ್ತ ಹಾಗೂ ವಿಧಾನ ಪರಿಷತ್ ಸದಸ್ಯ ಭೈರತಿ ಸುರೇಶ್ ಹೆಸರಿನಲ್ಲಿ ಸಿದ್ಧವಾಗಿದ್ದ ಬಿ ಫಾರಂಗೆ ಕಾಂಗ್ರೆಸ್ ಹೈಕಮಾಂಡ್ ಮಂಗಳವಾರ ತಡೆ ನೀಡಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್ ಅವರು ವರಿಷ್ಠರ ಬಳಿ ಹೆಬ್ಬಾಳ ಕ್ಷೇತ್ರದಿಂದ ತಮ್ಮ ಮೊಮ್ಮಗನಿಗೆ ಟಿಕೆಟ್ ದೊರಕಿಸಿ ಕೊಡಲು ತೀವ್ರ ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿ ಫಾರಂಗೆ ತಡೆ ನೀಡಲಾಗಿದೆ.
ತಮ್ಮ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಟಿಕೆಟ್ ಕೊಡಿಸಲು ಜಾಫರ್ ಷರೀಫ್ ಶತಾಯಗತಾಯ ಯತ್ನಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ಭೈರತಿ ಸುರೇಶ್ ಗೆ ಬಿ ಫಾರಂ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಸೂಚನೆ ನೀಡುವ ಮೂಲಕ ಹೆಬ್ಬಾಳ ಕ್ಷೇತ್ರದ ಟಿಕೆಟ್ ಹಂಚಿಕೆ ಮತ್ತಷ್ಟು ಕಗ್ಗಂಟಾಗಿ ಪರಿಣಮಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಇಂದು ಸಂಜೆಯೊಳಗೆ ಹೆಬ್ಬಾಳ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಲಿದೆ ಎಂದು ವರದಿ ವಿವರಿಸಿದೆ. ಆ ನಿಟ್ಟಿನಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿ ಸಿಕೆ ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT