ಕೆಎಸ್ ಈಶ್ವರಪ್ಪ 
ರಾಜಕೀಯ

ಜಿಪಂ ಗೆ ಈಶ್ವರಪ್ಪ ಪುತ್ರ ಸ್ಪರ್ಧೆ

ದೇವೇಗೌಡರ ಕುಟುಂಬ ರಾಜಕಾರಣ ವಿರೋಧಿಸಿದ್ದ ಬಿಎಸ್ ವೈ ಅವರ ಪುತ್ರನಿಗೆ ಲೋಕಸಭಾ ಟಿಕೆಟ್ ಸಿಕ್ಕಾಗ ಅಸಮಾಧಾನಗೊಂಡಿದ್ದ...

ಶಿವಮೊಗ್ಗ: ದೇವೇಗೌಡರ ಕುಟುಂಬ ರಾಜಕಾರಣ ವಿರೋಧಿಸಿದ್ದ ಬಿಎಸ್ ವೈ ಅವರ ಪುತ್ರನಿಗೆ ಲೋಕಸಭಾ ಟಿಕೆಟ್ ಸಿಕ್ಕಾಗ ಅಸಮಾಧಾನಗೊಂಡಿದ್ದ ಕೆ.ಎಸ್.ಈಶ್ವರಪ್ಪ ಅವರು ಈಗ ಕುಟುಂಬ ರಾಜಕಾರಣಕ್ಕೆ ಅಡಿ ಇಟ್ಟಿದ್ದಾರೆ. ಪುತ್ರ. ಕೆ.ಇ.ಕಾಂತೇಶ್ ಅವರಿಗೆ ಬಿಜೆಪಿ ಶಿವಮೊಗ್ಗ ಹೊಳಲೂರು ಜಿಪಂ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದೆ. 
ಕುಟುಂಬ ರಾಜಕಾರಣ ವಿರೋಧಿಸಿ ಪಕ್ಷದಲ್ಲಿ ಭಾರಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಸ್.ಎನ್. ಚನ್ನಬಸಪ್ಪ ಅವರು ಪಕ್ಷದ ಎಳ್ಲಾ ಹುದ್ದೆಗಳಿಗೆ ರಾಜಿನಾಮೆ ಸಲ್ಲಿಸಿದ್ದು, ಬಿಜೆಪಿ ಕಚೇರಿ ಎದುರು ಟಿಕೆಟ್ ವಂಚಿತರು ಧರಣಿ ನಡೆಸಿದ್ದಾರೆ. ನಿರ್ದಿಷ್ಟವಾಗಿ ಕಾಂತೇಶ್ ಅವರಿಗೆ ಟಿಕೆಟ್ ಕೊಡುವುದನ್ನು ಅವರು ವಿರೋಧಿಸಿಲ್ಲವಾದರೂ ಅವರ ರಾಜಿನಾಮೆ ಪತ್ರದಲ್ಲಿ ಈ ಭಾವ ಸ್ಪಷ್ಟವಾಗಿದೆ. 
ಇದೆಲ್ಲದರ ನಡುವೆಯೂ ಟಿಕೆಟ್ ದೊರಕಿದೆ. ಈ ಬಗ್ಗೆ ಪಕ್ಷದ ಜಿಲ್ಲಾಧ್ಯಕ್ಷ ದತ್ತಾತ್ರಿ ಅವರು, ಕಾಂತೇಶ್ ಅವರ ಸ್ಪರ್ಥೆ ಕುಟುಂಬ ರಾಜಕಾರಣದ ವ್ಯಾಪ್ತಿಗೆ ಬರುವುದಿಲ್ಲ. 10 ವರ್ಷದಿಂದ ಬಿಜೆಪಿಯ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಹೊಳಲೂರು ಕ್ಷೇತ್ರ ಕಾರ್ತಕರ್ತರೂ ಇವರ ಉಮೇದುವಾರಿಕೆ ಬೆಂಬಲಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT