ವಿಧಾನ ಸೌಧ 
ರಾಜಕೀಯ

ಉಪ ಚುನಾವಣೆಯಲ್ಲಿ ಜಯ ಗಳಿಸಲು ರಾಜ್ಯ ಸರ್ಕಾರದ ತಂತ್ರ

ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಅಭ್ಯರ್ಥಿಗಳನ್ನು ....

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ  ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯನ್ನು ಸಚಿವರಿಗೆ ವಹಿಸಿದೆ. ಬಳ್ಳಾರಿ ಉಪ ಚುನಾವಣೆ ಗೆಲ್ಲಿಸಿಕೊಟ್ಟಿದ್ದ ಇಂಧನ ಸಚಿವ ಡಿ.ಕೆ ಶಿವಕುಮಾರ್ ಗೆ ಹೆಬ್ಬಾಳ ಉಸ್ತುವಾರಿ ವಹಿಸಿಕೊಡಲಾಗಿ

ಬೀದರ್ ಕ್ಷೇತ್ರದ ಉಸ್ತುವಾರಿಯನ್ನು ಸಚಿವರಾದ ಎಸ್. ಆರ್ ಪಾಟೀಲ್ , ಖಮರುಲ್ಲಾ ಇಸ್ಲಾಂ, ಬಾಬುರಾವ್ ಚಿಂಚನಸೂರ್, ಉಮಾಶ್ರೀ, ದೇವದುರ್ಗ ಕ್ಷೇತ್ರವನ್ನು ಸಚಿವರಾದ ಎಚ್. ಸಿ ಮಹಾದೇವಪ್ಪ , ಶರಣ ಪ್ರಕಾಶ ಪಾಟೀಲ್, ಎಚ್. ಆಂಜನೇಯ ಹಾಗೂ ಹೆಬ್ಬಾಳ ಕ್ಷೇತ್ರವನ್ನು ಸಚಿವರಾದ ಡಿ.ಕೆ ಶಿವಕುಮಾರ್ . ಕೆ.ಜೆ ಜಾರ್ಜ್ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ದಿನೇಶ್ ಗೂಂಡೂರಾವ್  ಅವರಿಗೆ ವಹಿಸಿದೆ.

ಗುರುವಾರ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.  ಕಾರಮಿಕ ಸಚಿವ ಪರಮೇಶ್ವರ್ ನಾಯಕ್ ನೀಡಿರುವ ಹೇಳಿಕೆ, ಇನ್ವೆಸ್ಟ್ ಕರ್ನಾಟಕ-2016 ದ ಅಂತಿಮ ತಯಾರಿ ಮತ್ತು ಭದ್ರತೆ ಬಗ್ಗೆ ಮಾಹಿತಿ ವಿನಿಮಯ ಮಾಡಿದರು. ಉಪ ಚುನಾವಣೆಗೆ ಉಸ್ತುವಾರಿ ಸಚಿವರ ಪಟ್ಟಿ ಹಾಗೂ ಜಿಪಂ. ತಾಪಂ ಚುನಾವಣೆಗೆ 40 ಸ್ಟಾರ್ ಪ್ರಚಾರಕರ ಪಟ್ಟಿಗೆ ಎಐಸಿಸಿಯಿಂದ ಒಪ್ಪಿಗೆ ಪಡೆದಿರುವ ಬಗ್ಗೆ ಮಾಹಿತಿ ನೀಡಿದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT