ಸಿದ್ದರಾಮಯ್ಯ 
ರಾಜಕೀಯ

ಹೆಬ್ಬಾಳದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪ್ರಚಾರ

ರಾಜ್ಯದ ಮೂರು ವಿಧಾನ ಸಭೆ ಕ್ಷೇತ್ರಗಳ ಉಪ ಚುವಾವಣೆ ಪ್ರಚಾರ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ದರಾಗಿದ್ದು, ಭಾನುವಾರ ಹೆಬ್ಬಾಳ ಕ್ಷೇತ್ರದಲ್ಲಿ ಮತ ...

ಬೆಂಗಳೂರು: ರಾಜ್ಯದ ಮೂರು ವಿಧಾನ ಸಭೆ ಕ್ಷೇತ್ರಗಳ ಉಪ ಚುವಾವಣೆ ಪ್ರಚಾರ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ದರಾಗಿದ್ದು, ಭಾನುವಾರ ಹೆಬ್ಬಾಳ ಕ್ಷೇತ್ರದಲ್ಲಿ ಮತ ಯಾಚಿಸುವ ಮೂಲಕ ಚಾಲನೆ ನೀಡಲಿದ್ದಾರೆ.

ಕಾಂಗ್ರೆಸ್ ನಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುವುದಕ್ಕಾಗಿ ಪಕ್ಷದ ಅಭ್ಯರ್ಥಿ ರೆಹಮಾನ್ ಷರೀಫ್ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಇಳಿಯಲಿದ್ದಾರೆ. ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಹೆಬ್ಬಾಳ ಹಲವು ಕಾರಣಗಳಿಗೆ ಪ್ರತಿಷ್ಠಿತ ಕಣವಾಗಿದೆ. ಮೂರು ರಾಜಕೀಯ ಪಕ್ಷಗಳು ಹಗ್ಗ ಜಗ್ಗಾಟದ ಮೇಲೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ.

ಭಾನುವಾರ ರಜೆ ಹಿನ್ನೆಲೆಯಲ್ಲಿ ಮತದಾರರನ್ನು ನೇರವಾಗಿ ಕಂಡು ಮನವೊಲಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ಸಿದ್ದವಾಗಿದ್ದು, ಇಂಧನ ಸಚಿವ ಡಿ.ಕೆ ಶಿವಕುಮಾರ್ ಸಾರಥ್ಯದಲ್ಲಿ ಗೆಲುವಿಗೆ ಚುನಾವಣಾ ತಂತ್ರಗಳನ್ನು ರೂಪಿಸಲಾಗುತ್ತಿದೆ. ಈಗ ಮುಖ್ಯ ಮಂತ್ರಿಗಳೇ ಪ್ರಚಾರಕ್ಕೆ ಧುಮುಕುತ್ತಿದ್ದಾರೆ.

ಮಹಾ ಸಂಪರ್ಕ ಅಭಿಯಾನ: ಇತ್ತ ಬಿಜೆಪಿ ಅಭ್ಯರ್ಥಿ ವೈ.ಎ ನಾರಾಯಣ ಸ್ವಾಮಿ ಪರವಾಗಿ ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದಗೌಡ ಭಾನುವಾರ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 7 ರಿಂದಲೇ ಮಹಾ ಸಂಪರ್ಕ ಅಭಿಯಾನ ಆರಂಭಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!