ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಬಿಎಸ್ ವೈ ಹಾಗೂ ಇತರರು
ಬೆಂಗಳೂರು: ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಭಿನ್ನಮತಿಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇಂದು ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಪದಾಧಿಕಾರಿಗಳು, ಶಾಸಕರು, ಸಂಸದರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಯಾರೇ ಪಾಲ್ಗೊಂಡರೂ ಅವರ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಪಕ್ಷದಲ್ಲಿನ ಹಲವು ನಾಯಕರು ಸಾರ್ವಜನಿಕ ಸಭೆ ಹಾಗೂ ಮಾಧ್ಯಮಗಳ ಮುಂದೆ ಪಕ್ಷ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಅಂಥವರ ವಿರುದ್ಧ ನಿಷ್ಪಕ್ಷಪಾತವಾಗಿ ಕ್ರಮ ಜರುಗಿಸಲಾಗುವುದು. ಅಸಮಾಧಾನವಿದ್ದರೆ ಪಕ್ಷದ ಕಚೇರಿಗೆ ಆಗಮಿಸಿ ರ್ಚಚಿಸಿ ಪರಿಹಾರ ಕಂಡುಕೊಳ್ಳಿ ಎಂದು ಅತೃಪ್ತ ನಾಯಕರಿಗೆ ಸಲಹೆ ನೀಡಿದರು.
ಇವತ್ತಿನಿಂದಲೇ ಶಿಶ್ತು ಸಮಿತಿ ಪುನಾರಚಿಸಿ ಕ್ರಮ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ಗಂಟೆ ಬಾರಿಸಿದರು. ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್ ಈಶ್ವರಪ್ಪ ಸಭೆಗೆ ಗೈರಾಗಿದ್ದರು. ಆದರೆ ಈಶ್ವರಪ್ಪ ಜತೆಗೆ ಕಾಣಿಸಿಕೊಂಡ ಅತೃಪ್ತನಾಯಕರು ಸಭೆಯಲ್ಲಿ ಹಾಜರಿದ್ದರು. ಬಿಎಸ್ವೈ ಭಿನ್ನಮತ ಶಮನಗೊಳಿಸಲು ಈ ಸಭೆ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos