ಜಾಫರ್ ಷರೀಫ್ 
ರಾಜಕೀಯ

ದಲಿತ ಸಿಎಂ ಪರ ಹಾಗೂ ಸಿದ್ದರಾಮಯ್ಯ ವಿರುದ್ಧ ಜಾಫರ್ ಷರೀಫ್ ಬ್ಯಾಟಿಂಗ್

ದಲಿತ ಸಿಎಂ ಪರ ಬ್ಯಾಟಿಂಗ್ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ....

ಬೆಂಗಳೂರು: ದಲಿತ ಸಿಎಂ ಪರ ಬ್ಯಾಟಿಂಗ್ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸರ್ಕಾರದ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದ ಅರಮನೆ ಮೈದಾನದಲ್ಲಿ ದಲಿತ ನಾಯಕ ದಿ.ಬಸವಲಿಂಗಪ್ಪ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಜಾಫರ್ ಷರೀಫ್ ಅವರು, ದಲಿತರು ಸಿಎಂ ಆಗಬೇಕೆಂಬುದು ಇವತ್ತಿನ ಬೇಡಿಕೆಯೇನಲ್ಲ. ಆದರೆ ಅವಕಾಶ ಇದ್ದಾಗಲೆಲ್ಲಾ ದಲಿತರಿಗೆ ಸಿಎಂ ಸ್ಥಾನ ತಪ್ಪಿದೆ. ಈ ಹಿಂದೆ ಬಸವಲಿಂಗಪ್ಪ ಅವರಿಗೂ ಸಿಎಂ ಸ್ಥಾನ ತಪ್ಪಿದೆ ಎಂದರು.
ಇದೇ ವೇಳೆ ಅನ್ನ ಭಾಗ್ಯ ಯೋಜನೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಕೇಂದ್ರ ಸಚಿವ. ಅನ್ನಭಾಗ್ಯ ಯೋಜನೆ ಜನರಿಗೆ ತಲುಪಿಯೇ ಇಲ್ಲ. ಈ ಯೋಜನೆ ಕೇವಲ ಫ್ಲೆಕ್ಸ್ ಮತ್ತು ಬ್ಯಾನರ್ ಗೆ ಸೀಮಿತವಾಯ್ತೇ? ಎಂದು ಪ್ರಶ್ನಿಸಿದರು. ಅಲ್ಲದೆ ಯೋಜನೆಗಳು ಯಾವಾಗಲೂ ಜನಪರವಾಗಿರಬೇಕು. ವ್ಯಕ್ತಿಗತವಾದ ಯೋಜನೆಗಳು ಜನರನ್ನು ತಲುಪುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT