ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ 
ರಾಜಕೀಯ

ಸರ್ಕಾರದ ಮೌಢ್ಯ ನಿಷೇಧ ಕಾಯ್ದೆ ಜನ ವಿರೋಧಿ ಕಾಯ್ದೆಯಾಗಿದೆ: ಶೆಟ್ಟರ್

ರಾಜ್ಯ ಸರ್ಕಾರ ಜಾರಿಗೆ ತರಲಿರುವ ಕರ್ನಾಟಕ ನರಬಲಿ ಮತ್ತು ಇತರ ಅಮಾನವೀಯ ದುಷ್ಟ ಮತ್ತು ಅಘೋರಿ ಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧಕ ನಿರ್ಮೂಲನಾ ಕಾಯ್ದೆ-2016 ಜನ ವಿರೋಧಿ ಕಾಯ್ದೆಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ...

ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೆ ತರಲಿರುವ ಕರ್ನಾಟಕ ನರಬಲಿ ಮತ್ತು ಇತರ ಅಮಾನವೀಯ ದುಷ್ಟ ಮತ್ತು ಅಘೋರಿ ಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧಕ ನಿರ್ಮೂಲನಾ ಕಾಯ್ದೆ-2016 ಜನ ವಿರೋಧಿ ಕಾಯ್ದೆಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ಮೌಢ್ಯ ನಿಷೇಧ ಕಾಯ್ದೆ ಕುರಿತು ಸಂಪುಟ ಸಭೆ ಚರ್ಚೆ ನಡೆಸುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರ ಜಾರಿಗೆ ತರಲಿರುವ ಹೊಸ ಕಾಯ್ದೆ ಜನರ ಭಾವನೆಗಳಿಗೆ ನೋವುಂಟು ಮಾಡಲಿದೆ. ಸರ್ಕಾರದ ಹೊಸ ಕಾಯ್ದೆಯನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಕಾನೂನು ಎಂಬ ಹೆಸರಿಟ್ಟುಕೊಂಡು ಸರ್ಕಾರ ಜನರಿಗೆ ಕಿರುಕುಳ ನೀಡಿದಂತಾಗುತ್ತದೆ. ಹೋಮ, ಹವನಗಳನ್ನು ಮಾಡುವ ಜನರನ್ನು ಕಾಯ್ದೆ ತಡೆಹಿಡಿಯಲಿದೆ. ಅಮಾನವೀಯ ಚಟುವಟಿಕೆಗಳನ್ನು ತಡೆಯಲು ಸರ್ಕಾರ ಯತ್ನಿಸುತ್ತಿರುವುದೇ ಆದರೆ, ಅದಕ್ಕೆ ಸರಿಯಾದ ದಾರಿಯನ್ನು ಕಂಡುಕೊಳ್ಳಲಿ. ಜನರಿಗೆ ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾಯ್ದೆಯನ್ನು ಜಾರಿಗೆ ತಂದಿದ್ದೇ ಆದರೆ, ಕಾಂಗ್ರೆಸ್ ಸಾರ್ವಜನಿಕರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಂದೆ ಖಾನ್ ಚಂದ್ ನಿಧನ: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್ ಗೆ ಆಘಾತ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

SCROLL FOR NEXT