ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ 
ರಾಜಕೀಯ

ಸರ್ಕಾರದ ಮೌಢ್ಯ ನಿಷೇಧ ಕಾಯ್ದೆ ಜನ ವಿರೋಧಿ ಕಾಯ್ದೆಯಾಗಿದೆ: ಶೆಟ್ಟರ್

ರಾಜ್ಯ ಸರ್ಕಾರ ಜಾರಿಗೆ ತರಲಿರುವ ಕರ್ನಾಟಕ ನರಬಲಿ ಮತ್ತು ಇತರ ಅಮಾನವೀಯ ದುಷ್ಟ ಮತ್ತು ಅಘೋರಿ ಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧಕ ನಿರ್ಮೂಲನಾ ಕಾಯ್ದೆ-2016 ಜನ ವಿರೋಧಿ ಕಾಯ್ದೆಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ...

ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೆ ತರಲಿರುವ ಕರ್ನಾಟಕ ನರಬಲಿ ಮತ್ತು ಇತರ ಅಮಾನವೀಯ ದುಷ್ಟ ಮತ್ತು ಅಘೋರಿ ಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧಕ ನಿರ್ಮೂಲನಾ ಕಾಯ್ದೆ-2016 ಜನ ವಿರೋಧಿ ಕಾಯ್ದೆಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ಮೌಢ್ಯ ನಿಷೇಧ ಕಾಯ್ದೆ ಕುರಿತು ಸಂಪುಟ ಸಭೆ ಚರ್ಚೆ ನಡೆಸುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರ ಜಾರಿಗೆ ತರಲಿರುವ ಹೊಸ ಕಾಯ್ದೆ ಜನರ ಭಾವನೆಗಳಿಗೆ ನೋವುಂಟು ಮಾಡಲಿದೆ. ಸರ್ಕಾರದ ಹೊಸ ಕಾಯ್ದೆಯನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಕಾನೂನು ಎಂಬ ಹೆಸರಿಟ್ಟುಕೊಂಡು ಸರ್ಕಾರ ಜನರಿಗೆ ಕಿರುಕುಳ ನೀಡಿದಂತಾಗುತ್ತದೆ. ಹೋಮ, ಹವನಗಳನ್ನು ಮಾಡುವ ಜನರನ್ನು ಕಾಯ್ದೆ ತಡೆಹಿಡಿಯಲಿದೆ. ಅಮಾನವೀಯ ಚಟುವಟಿಕೆಗಳನ್ನು ತಡೆಯಲು ಸರ್ಕಾರ ಯತ್ನಿಸುತ್ತಿರುವುದೇ ಆದರೆ, ಅದಕ್ಕೆ ಸರಿಯಾದ ದಾರಿಯನ್ನು ಕಂಡುಕೊಳ್ಳಲಿ. ಜನರಿಗೆ ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾಯ್ದೆಯನ್ನು ಜಾರಿಗೆ ತಂದಿದ್ದೇ ಆದರೆ, ಕಾಂಗ್ರೆಸ್ ಸಾರ್ವಜನಿಕರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT