ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಉಳಿದ 2 ವರ್ಷಗಳಲ್ಲಿ ತಪ್ಪು ತಿದ್ದಿಕೊಳ್ಳಲು ಪ್ರಯತ್ನಿಸಿ: ಸರ್ಕಾರಕ್ಕೆ ಎಚ್.ಡಿ.ಕೆ ಚಾಟಿ

ಮೂರು ವರ್ಷಗಳ ಕಾಲ ಆಡಳಿತ ನಡೆಸಿದ್ದೀರಾ, ಉಳಿದ 2 ವರ್ಷಗಳ ಅವಧಿಯಲ್ಲಾದರೂ ನೀವು ಮಾಡಿರುವ ತಪ್ಪುಗಳನ್ನು ತಿದ್ದಿಕೊಳ್ಳಿ ಎಂದು ಮಾಜಿ ,..

ಬೆಂಗಳೂರು: ಮೂರು ವರ್ಷಗಳ ಕಾಲ ಆಡಳಿತ ನಡೆಸಿದ್ದೀರಾ, ಉಳಿದ 2 ವರ್ಷಗಳ ಅವಧಿಯಲ್ಲಾದರೂ ನೀವು ಮಾಡಿರುವ ತಪ್ಪುಗಳನ್ನು ತಿದ್ದಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರ ಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.

ಮಡಿಕೇರಿಯಲ್ಲಿ  ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಿಮ್ಮ ಆಡಳಿತದಲ್ಲಿ ನಿಮಗೆ ಒತ್ತಡ ಇರಬಹುದು ನಿಜ. ಆದರೆ ಜನರ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದರೆ ಸೂಕ್ತ ಕ್ರಮ ಕೈಗೊಂಡು, ಮತ್ತಷ್ಟು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳದಂತೆ ಮಾಡಿ ಎಂದು ಹೇಳಿದರು.

ಕರ್ನಾಟಕದಲ್ಲಿ ಅಧಿಕಾರಿಗಳು ಬದುಕಲಾರದಂಥ ಸ್ಥಿತಿ ನಿರ್ಮಾಣವಾಗಿದೆ, ದಾಳಿ ನಡೆಸಲು ಹೋದ ಅಧಿಕಾರಿಗಳ ಮೇಲೆ ಪ್ರತಿದಾಳಿ. ನಿಮಗೆ ನೀವೇ ಪ್ರಶ್ನಿಸಿಕೊಳ್ಳಿ. ಆದರ್ಶ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಇಡುತ್ತಿದೆಯಾ? ಇಷ್ಟೆಲ್ಲಾ ಆದರೂ ನಿಮಗೆ ಪಾಪ ಪ್ರಜ್ಞೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಪ್ರಕರಣದಲ್ಲಿ ನಾವು ರಾಜಕೀಯ ಮಾಡ್ತಿಲ್ಲ. ಕಾನೂನು ನೋಡಿಕೊಂಡು ಗಣಪತಿ ಆತ್ಮಹತ್ಯೆ ಮಾಡಿಕೊಂಡ್ರಾ? ಡಿವೈಎಸ್ಪಿ ಗಣಪತಿ ಕುಟುಂಬವನ್ನು ಹಾಳು ಮಾಡಿದ್ದೀರಿ. ಗಣಪತಿ ಕುಟುಂಬದ ದೂರನ್ನು ಪರಿಗಣಿಸದ ಹಿನ್ನೆಲೆಯಲ್ಲಿ ನಾನೇ ಒಬ್ಬ ವಕೀಲರನ್ನು ನೇಮಿಸಿದ್ದೇನೆ. ಪ್ರಕರಣದ ಬಗ್ಗೆ ಕೋರ್ಟ್ ಮೊರೆ ಹೋಗಿದ್ದೇವೆ. ಅದರ ವಿಚಾರಣೆ ಜುಲೈ 18ಕ್ಕೆ ನಡೆಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT