ಸಿದ್ದರಾಮಯ್ಯ-ಈಶ್ವರಪ್ಪ 
ರಾಜಕೀಯ

ಈಶ್ವರಪ್ಪನನ್ನು ಸದನದಿಂದ ಹೊರಗೆ ಹಾಕ್ರಿ: ಸಿಎಂ ಸಿದ್ದರಾಮಯ್ಯ

ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣ ವಿಧಾನಮಂಡಲದ ಉಭಯ ಸದನಗಳಲ್ಲೂ ಮಾರ್ಧನಿಸಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡಿದ ವಿಪಕ್ಷ...

ಬೆಂಗಳೂರು: ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣ ವಿಧಾನಮಂಡಲದ ಉಭಯ ಸದನಗಳಲ್ಲೂ ಮಾರ್ಧನಿಸಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡಿದ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ, ಕೆಜೆ ಜಾರ್ಜ್ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಈ ಸರ್ಕಾರ ಅವರ ರಕ್ಷಣೆಗೆ ನಿಂತಿದೆ. ಇದು ಕೊಲೆಗಡುಕ ಸರ್ಕಾರ ಎಂದು ಆರೋಪಿಸಿದರು.

ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರತಿ ಪಕ್ಷದ ನಾಯಕ ಈಶ್ವರಪ್ಪ ನಡುವೆ ನೇರಾನೇರ ಮಾತಿನ ಚಕಮಕಿ ನಡೆಯಿತು. ಈಶ್ವರಪ್ಪನವರು ಇದು ಕೊಲೆಗಡುಕ ಸರ್ಕಾರ ಎಂದು ಹೇಳುತ್ತಿದ್ದಂತೆ ಕೋಪಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏರುಧ್ವನಿಯಲ್ಲಿ ಈಶ್ವರಪ್ಪನನ್ನು ಸದನದಿಂದ ಹೊರ ಹಾಕ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರ ಈ ಮಾತಿಗೆ ಈಶ್ವರಪ್ಪ ಏನ್ ಮಾತಾಡ್ತಾ ಇದ್ದೀರಿ..ಮನೆಗೆ ಹೋಗಿ ಹೇಳಿ..ನೀವ್ ಹೋಗಿ ಹೊರಗೆ ಎಂದು ತಿರುಗೇಟು ನೀಡಿದರು. ಈ ವೇಳೆ ಬಿಜೆಪಿ ಸದಸ್ಯರು ಇದು ಕೊಲೆಗಡುಕ ಸರ್ಕಾರ ಎಂದು ಘೋಷಣೆ ಕೂಗಿ ಕೋಲಾಹಲ ಎಬ್ಬಿಸಿದರು. ಇದರಿಂದಾಗಿ ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಕಲಾಪವನ್ನು 20 ನಿಮಿಷಗಳ ಕಾಲ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT