ಸದನದಲ್ಲಿ ಪ್ರತಿಪಕ್ಷಗಳ ಸದಸ್ಯರು 
ರಾಜಕೀಯ

ಜಾರ್ಜ್ ರಾಜಿನಾಮೆ ನೀಡುವವರೆಗೂ ಹೋರಾಟ: ಶೆಟ್ಟರ್, ಎಚ್ ಡಿಕೆ

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷಗಳ...

ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷಗಳ ನಾಯಕರು, ಪ್ರಕರಣ ಸಂಬಂಧ ಸಚಿವ ಕೆ.ಜೆ.ಜಾರ್ಜ್ ರಾಜಿನಾಮೆ ನೀಡಲೇಬೇಕು ಎಂದು ಗುರುವಾರ ಆಗ್ರಹಿಸಿದ್ದಾರೆ.
ಪ್ರತಿಪಕ್ಷಗಳ ತೀವ್ರ ಗದ್ದಲದ ಹಿನ್ನಲೆಯಲ್ಲಿ ಉಭಯ ಸದನಗಳ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ ನಂತರ ವಿಧಾಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಅಹೋರಾತ್ರಿ ಧರಣಿ ಕೈಗೊಂಡರು ಕೆ.ಜೆ.ಜಾರ್ಜ್ ರಾಜಿನಾಮೆ ಪಡೆಯುತ್ತಿಲ್ಲ ಎಂದರು. ಅಲ್ಲದೆ ಯಾವುದೇ ಚರ್ಚೆಯಿಲ್ಲದೆ ಎಲ್ಲಾ ಇಲಾಖೆಯ ಪ್ರಮುಖ ವಿಧೇಯಕಗಳನ್ನು ಅಂಗೀಕರಿಸಿರುವ ಸರ್ಕಾರ, ವಿಧಾನಸಭೆ ಕಲಾಪವನ್ನು ನಾಳೆಯಿಂದ ಅನಿರ್ಧಿಷ್ಟಾವಧಿಗೆ ಮುಂದೂಡುವ ಕುತಂತ್ರ ನಡೆಸಿದೆ ಎಂದು ಆರೋಪಿಸಿದರು.
ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಯಾವ ರೀತಿಯ ಉತ್ತರ ನೀಡಿದ್ದೀರಿ ಎಂದು ರಾಜ್ಯದ ಜನತೆ ನೋಡಿದ್ದಾರೆ. ಗಣಪತಿ ಆತ್ಮಹತ್ಯೆಗೂ ಮುನ್ನ ತಮ್ಮ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ನೀಡಿದ್ದಾರೆ. ಡೈಯಿಂಗ್ ಡಿಕ್ಲೆರೇಶನ್ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಶೆಟ್ಟರ್ ಒತ್ತಾಯಿಸಿದರು,
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ನ್ಯಾಯಾಂಗ ತನಿಖೆಯಿಂದ ಸತ್ಯಾಂಶ ಹೊರ ಬರುವುದಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ಜನರಲ್ಲಿ ವಿಶ್ವಾಸ ಮೂಡಬೇಕಾದರೆ ಕೆ.ಜೆ.ಜಾರ್ಜ್ ಅವರ ರಾಜಿನಾಮೆ ಪಡಿಯಿರಿ ಎಂದು ಆಗ್ರಹಿಸಿದರು.
ರಾಜಕೀಯ ಉದ್ದೇಶದಿಂದ ಜಾರ್ಜ್ ರಕ್ಷಣೆ ನಿಂತಿರುವ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿರಲು ಅನಫಿಟ್. ತಮ್ಮ ಸರಕಾರದ ವೈಪಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT