ಜಾರ್ಜ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಜಾರ್ಜ್ ರಾಜಿನಾಮೆಯನ್ನು ನಾನು ನೋವಿನಿಂದ ಅಂಗೀಕರಿಸಿದ್ದೇನೆ: ಸಿದ್ದರಾಮಯ್ಯ

ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಧ ಜಾರ್ಜ್‌ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದು, ಅದನ್ನು...

ಬೆಂಗಳೂರು: ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಧ ಜಾರ್ಜ್‌ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದು, ಅದನ್ನು ನೋವಿನಿಂದ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ  ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್‌ ಅವರು ಜಂಟಿ ಸುದ್ದಿಗೋಷ್ಟಿ ನಡೆಸಿದರು.

ಸಂಪುಟ ಸಹೋದ್ಯೋಗಿಯಾಗಿರುವ ಜಾರ್ಜ್ ರಾಜೀನಾಮೆ ನೀಡುವುದು ಬೇಡ ಎಂದರೂ ನೈತಿಕತೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ಅವರ ಭಾವನೆಗಳಿಗೆ ಗೌರವ ಕೊಡಬೇಕೆಂದು ರಾಜೀನಾಮೆ ಅಂಗೀಕರಿಸಿದ್ದೇನೆ. ಇನ್ನೂ ಯಡಿಯೂರಪ್ಪರಿಂದ ಹಿಡಿದು ಬಿಜೆಪಿ ನಾಯಕರಿಗೆ ರಾಜೀನಾಮೆ ಕೇಳುವ ಯಾವ ನೈತಿಕತೆಯಿಲ್ಲ. ಯಡಿಯೂರಪ್ಪ ಮೇಲೆ 30 ಕೇಸ್‌ಗಳಿವೆ. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ತಮ್ಮ ಬಗ್ಗೆ ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಾವು ಕಾನೂನಿನ ಬಗ್ಗೆ ಗೌರವ ಹೊಂದಿದವರು, ಅದು ಯಾವುದೇ ಕೋರ್ಟ್‌ ಆದೇಶ ಇರಲಿ ಅದನ್ನು ಪಾಲಿಸುತ್ತೇವೆ ಎಂದು ಹೇಳಿದ್ದಾರೆ.

5 ವರ್ಷ ಅಧಿಕಾರದಲ್ಲಿರುವ ವೇಳೆ ಬಿಜೆಪಿಯವರು ಒಂದೂ ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. ಈಗ ಬಿಜೆಪಿಯ ನಾಯಕರು ಸಿಬಿಐಗೆ ಕೊಡಿ ಎನ್ನುವುದನ್ನು ಬಾಯಿ ಪಾಠ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದರು. ಬಿಜೆಪಿ ನಾಯಕರು ರೋಹಿತ್‌ ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಬಂಡಾರು ದತ್ತಾತ್ರೇಯ ಅವರ ರಾಜೀನಾಮೆ ಕೇಳಲಿ. ಸ್ಮೃತಿ ಇರಾನಿ ರಾಜೀನಾಮೆ ಕೇಳಲಿ. ಹೊಸದಾಗಿ ಸಂಪುಟ ಸೇರಿರುವ 19 ಸಚಿವರ ಪೈಕಿ 9 ಮಂದಿಯ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಾಗಿದೆ ಅವರ ರಾಜೀನಾಮೆ ಕೇಳಲಿ ಎಂದರು.

ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ: ಡಿವೈಎಸ್ ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಪುನರುಚ್ಛರಿಸಿದ್ದಾರೆ. ನ್ಯಾಯಾಂಗ ಆಯೋಗವನ್ನು ಈಗಾಗಲೇ ರಚನೆ ಮಾಡಲಾಗಿದೆ. ಪ್ರಕರಣ ಈಗಾಗಲೇ ಕೋರ್ಟ್ ಗೆ ಹೋಗಿದೆ. ಹಾಗಾಗಿ ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಪರಮೇಶ್ವರ್‌ ಮಾತನಾಡಿ ಸತ್ಯ ಹೊರಗಡೆ ಬರಬೇಕು ಎನ್ನುವ ದೃಷ್ಟಿಯಿಂದ ಪಕ್ಷ  ರಾಜೀನಾಮೆ ಒಪ್ಪಿಕೊಂಡಿದೆ. ಇಷ್ಟಾದರೂ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆದೊಯ್ಯುತ್ತಿದ್ದಾರೆ ಎಂದರು. ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರದ ವಿರುದ್ಧ ಕಾಂಗ್ರೆಸ್‌ ಸುಮ್ಮನೆ ಕೂರುವುದಿಲ್ಲ ಸಚಿವರು, ಶಾಸಕರು , ಕಾಂಗ್ರೆಸ್‌ ಕಾರ್ಯಕರ್ತರು ಸಂಘಟಿತರಾಗಿ ರಾಜ್ಯದ ಜನತೆಗೆ ಸತ್ಯ ತಿಳಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT