ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ 
ರಾಜಕೀಯ

ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ: ಜಾಫರ್ ಷರೀಫ್ ಸಲಹೆ

ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ...

ಬೆಂಗಳೂರು: ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಶರೀಫ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಅಧಃಪತನವಾದಾಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಉಂಟು. ಇರುವ ಅಧಿಕಾರವನ್ನು ಉಳಿಸಿಕೊಳ್ಳಬೇಕು. ಇಲ್ಲದ ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವುದು ಒಳ್ಳೆಯದಲ್ಲ ಎಂದರು.

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್ ಅವರು ಮೊದಲೇ ರಾಜೀನಾಮೆ ಕೊಡಬೇಕಾಗಿತ್ತು. ರಾಜೀನಾಮೆ ಕೊಡಲು ವಿಳಂಬವಾದದ್ದು ಏಕೆ ಎಂಬುದು ನನಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿಗಳನ್ನೇ ಕೇಳಿ ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದರಲ್ಲದೆ, ಸರ್ಕಾರ ಪ್ರಕರಣದ ತನಿಖೆ ನಡೆಸಿದರಷ್ಟೇ ಸಾಲದು, ಸಹಾನುಬೂತಿ ತೋರಬೇಕಿದೆ ಎಂದು ಅಭಿಪ್ರಾಯ ಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT