ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ 
ರಾಜಕೀಯ

ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ: ಜಾಫರ್ ಷರೀಫ್ ಸಲಹೆ

ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ...

ಬೆಂಗಳೂರು: ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಶರೀಫ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಅಧಃಪತನವಾದಾಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಉಂಟು. ಇರುವ ಅಧಿಕಾರವನ್ನು ಉಳಿಸಿಕೊಳ್ಳಬೇಕು. ಇಲ್ಲದ ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವುದು ಒಳ್ಳೆಯದಲ್ಲ ಎಂದರು.

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್ ಅವರು ಮೊದಲೇ ರಾಜೀನಾಮೆ ಕೊಡಬೇಕಾಗಿತ್ತು. ರಾಜೀನಾಮೆ ಕೊಡಲು ವಿಳಂಬವಾದದ್ದು ಏಕೆ ಎಂಬುದು ನನಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿಗಳನ್ನೇ ಕೇಳಿ ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದರಲ್ಲದೆ, ಸರ್ಕಾರ ಪ್ರಕರಣದ ತನಿಖೆ ನಡೆಸಿದರಷ್ಟೇ ಸಾಲದು, ಸಹಾನುಬೂತಿ ತೋರಬೇಕಿದೆ ಎಂದು ಅಭಿಪ್ರಾಯ ಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT