ಶ್ವೇತಾ ಅವರನ್ನು ಅಭಿನಂದಿಸುತ್ತಿರುವ ಚುನಾವಣಾ ಅಧಿಕಾರಿ ಕುಂಜಪ್ಪ 
ರಾಜಕೀಯ

ಹಾಸನ ಜಿಲ್ಲಾ ಪಂಚಾಯ್ತಿ 'ಕೈ' ವಶ, ಅಧ್ಯಕ್ಷರಾಗಿ ಶ್ವೇತಾ ದೇವರಾಜ್ ಆಯ್ಕೆ

ಕಾಂಗ್ರೆಸ್-ಜೆಡಿಎಸ್ ನಡುವೆ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದ ಹಾಸನ ಜಿಲ್ಲಾ ಪಂಚಾಯ್ತಿ ಕಡೆಗೂ 'ಕೈ' ವಶವಾಗಿದ್ದು,...

ಹಾಸನ: ಕಾಂಗ್ರೆಸ್-ಜೆಡಿಎಸ್ ನಡುವೆ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದ ಹಾಸನ ಜಿಲ್ಲಾ ಪಂಚಾಯ್ತಿ ಕಡೆಗೂ 'ಕೈ' ವಶವಾಗಿದ್ದು, ಬಾಗೇಶಪುರ ಕ್ಷೇತ್ರದ ಕಾಂಗ್ರೆಸ್ ಸದಸ್ಯೆ ಶ್ವೇತಾ ದೇವರಾಜ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋರಂ ಕೊರತೆ ಸೃಷ್ಟಿಸುವ ಮೂಲಕ ಜೆಡಿಎಸ್ ಸದಸ್ಯರು ಪದೇಪದೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯನ್ನು ಮುಂದೂಡಿದ್ದರು. ಆದರೆ ಅಂತಿಮವಾಗಿ ಇಂದು ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಶ್ವೇತಾ ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ನ ಎಚ್.ಪಿ. ಶ್ರೀನಿವಾಸ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು. 
ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​ನ ಎ.ಡಿ. ಚಂದ್ರಶೇಖರ್ ಹಾಗೂ ಜೆಡಿಎಸ್ ಎಚ್.ಪಿ. ಶ್ರೀನಿವಾಸ್ ಸ್ಪರ್ಧಿಸಿದ್ದರು. ಇಬ್ಬರೂ ಅಂತಿಮ ಕಣದಲ್ಲಿ ಉಳಿದಿರುವುದರಿಂದ ಮತದಾನ ನಡೆಸಲಾಯಿತು. ಚಂದ್ರಶೇಖರ್ 16 ಮತ ಗಳಿಸಿದರೆ, 23 ಸದಸ್ಯರ ಬೆಂಬಲ ಪಡೆದ ಶ್ರೀನಿವಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಹಾಸನ ಜಿ.ಪಂ. ಒಟ್ಟಾರೆ 40 ಸ್ಥಾನಗಳಲ್ಲಿ ಜೆಡಿಎಸ್‌ನ 23,  ಕಾಂಗ್ರೆಸ್‌ನ 16 ಹಾಗೂ ಬಿಜೆಪಿಯ ಒಬ್ಬ ಸದಸ್ಯರಿದ್ದಾರೆ. ಜೆಡಿಎಸ್‌ಗೆ ಬಹುಮತ ಇರುವುದರಿಂದ ಭವಾನಿ ರೇವಣ್ಣ ಅವರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗುತ್ತಾರೆ ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಮೀಸಲಾತಿ ಘೋಷಿಸುವಾಗ ಹಾಸನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಿಡಲಾಯಿತು.
ಈ ವರ್ಗದಿಂದ ಏಕೈಕ ಮಹಿಳೆ ಆಯ್ಕೆಯಾಗಿದ್ದು, ಅವರು ಕಾಂಗ್ರೆಸ್‌ನಿಂದ ಗೆದ್ದಿದ್ದಾರೆ. ಇದರಿಂದ ಜೆಡಿಎಸ್‌ಗೆ ಬಹುಮತ ಇದ್ದರೂ ಅಧಿಕಾರ ಹಿಡಿಯಲಾಗದ ಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT