ಜಗದೀಶ್ ಶೆಟ್ಟರ್ 
ರಾಜಕೀಯ

ರಾಜ್ಯಸಭೆ ಚುನಾವಣೆ; ಮತಕ್ಕಾಗಿ ಶಾಸಕರಿಂದ ಹಣಕ್ಕೆ ಡಿಮಾಂಡ್ ದುರದೃಷ್ಟಕರ: ಶೆಟ್ಟರ್

ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕಲು ಶಾಸಕರು 5ರಿಂದ 10 ಕೋಟಿ ರುಪಾಯಿ ಡಿಮಾಂಡ್ ಮಾಡುತ್ತಿರುವುದು ದುರದೃಷ್ಟಕರ ಎಂದು ಪ್ರತಿಪಕ್ಷ ನಾಯಕ...

ಹಾವೇರಿ: ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕಲು ಶಾಸಕರು 5ರಿಂದ 10 ಕೋಟಿ ರುಪಾಯಿ ಡಿಮಾಂಡ್ ಮಾಡುತ್ತಿರುವುದು ದುರದೃಷ್ಟಕರ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಖಾಸಗಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಶಾಸಕರು ಹಣಕ್ಕೆ ಡಿಮಾಂಡ್ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಶಾಸಕರು ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡು ಎಂದಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಹಣವೇ ಪ್ರಮುಖ ವಿಷಯವಾಗುತ್ತಿರುವುದು ಕೇದಕರ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇದೇ ವೇಳೆ ಪೊಲೀಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶೆಟ್ಟರ್, ಪೊಲೀಸರು ಇಲ್ಲದೆ ಮುಖ್ಯಮಂತ್ರಿ ಮತ್ತು ಸಚಿವರು ಓಡಾಡಿದ ಪಕ್ಷದಲ್ಲಿ ಜನರು ಇವರನ್ನು ಹಿಡಿದು ಹೊಡೆಯುತ್ತಾರೆ. ಹೀಗಾಗಿ ಈ ಕೂಡಲೆ ಸಿಎಂ ಮತ್ತು ಗೃಹ ಸಚಿವರು ಪೊಲೀಸರನ್ನು ಕರೆದು ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು,
ಮುಖ್ಯಮಂತ್ರಿ, ಸಚಿವರು ಸೇರಿದಂತೆ ಜನರನ್ನು ರಕ್ಷಣೆ ಮಾಡುತ್ತಿರುವ ಪೊಲೀಸರು ಬೀದಿಗಿಳಿದು ಹೋರಾಟ ಮಾಡುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್