ಡಿ.ವಿ.ಸದಾನಂದಗೌಡ 
ರಾಜಕೀಯ

ವೋಟಿಗಾಗಿ ನೋಟು ಕೇಳಿದ ಶಾಸಕರಿಗೆ ಮತದಾನಕ್ಕೆ ಅವಕಾಶ ನೀಡಬೇಡಿ: ಸದಾನಂದಗೌಡ

ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ಹಣಕ್ಕಾಗಿ ಡಿಮಾಂಡ್ ಮಾಡಿದ ಶಾಸಕರನ್ನು ಚುನಾವಣೆಯಿಂದ ದೂರವಿಡುವಂತೆ ಕೇಂದ್ರ ಕಾನೂನು...

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ಹಣಕ್ಕಾಗಿ ಡಿಮಾಂಡ್ ಮಾಡಿದ ಶಾಸಕರನ್ನು ಚುನಾವಣೆಯಿಂದ ದೂರವಿಡುವಂತೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅವರು ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇಂದು ಶಾಸಕರ ವಿರುದ್ಧದ ಕುಟುಕು ಕಾರ್ಯಾಚರಣೆಯ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸದಾನಂದಗೌಡ, ವೋಟಿಗಾಗಿ ನೋಟು ಕೇಳಿದ ಶಾಸಕರಿಗೆ ಯಾವುದೇ ಕಾರಣಕ್ಕೂ ಮತದಾನಕ್ಕೆ ಅವಕಾಶ ನೀಡಬೇಡಿ ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸದಾನಂದಗೌಡ, ತಮ್ಮಲ್ಲಿರುವ ಆಂತರಿಕ ಕಚ್ಚಾಟದಿಂದ ಹೆದರಿಕೆಯಾಗಿ ಕಾಂಗ್ರೆಸ್‌ನವರು ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ದೇಶಾದ್ಯಂತ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್‌ನವರಿಗೆ ಈ ಬಾರಿಯೂ ಸೋಲಾಗಬಹುದೆಂದು ಹೆದರಿ ತಮ್ಮ ಶಾಸಕರೂ ಸೇರಿದಂತೆ ಪಕ್ಷೇತರರನ್ನು ರೆಸಾರ್ಟ್‌ಗೆ ಕರೆದೊಯ್ದಿದ್ದಾರೆ ಎಂದು ವ್ಯಂಗ್ಯವಾಡಿದರು.
ಕುಟುಕು ಕಾರ್ಯಾಚರಣೆಯಲ್ಲಿ ಕೋಲಾರ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್, ಆಳಂದ್ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಬಸವಕಲ್ಯಾಣ ಜೆಡಿಎಸ್ ಶಾಸಕ ಮಲ್ಲಕಾರ್ಜುನ್ ಖೂಬಾ ಮತ ಹಾಕಲು ಐದು ಕೋಟಿ ರುಪಾಯಿ ಕೇಳಿರುವುದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಬಹಿರಂಗವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT