ಪರಮೇಶ್ವರ್ ನಾಯ್ಕ್ 
ರಾಜಕೀಯ

ರಾಜೀನಾಮೆ ಕೊಡು ಅಂತಾ ಹೇಳೋದಕ್ಕೆ ಅನುಪಮಾ ಶೆಣೈ ಯಾರು? ಪರಮೇಶ್ವರ್ ನಾಯ್ಕ್

ತಮ್ಮ ರಾಜೀನಾಮೆ ಕೇಳಲು ಅನುಪಮಾ ಶೆಣೈ ಯಾರು ಎಂದು ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ ಪರಮೇಶ್ವರ ನಾಯ್ಕ ..

ಚಿಕ್ಕಮಗಳೂರು: ತಮ್ಮ ರಾಜೀನಾಮೆ ಕೇಳಲು ಅನುಪಮಾ ಶೆಣೈ ಯಾರು ಎಂದು ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ ಪರಮೇಶ್ವರ ನಾಯ್ಕ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆಗೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು. ಒಂದು ವೇಳೆ ತಮ್ಮಿಂದ ತಪ್ಪಾಗಿದ್ದರೆ ಅದನ್ನು ವಿಚಾರಿಸಲು ಮುಖ್ಯಮಂತ್ರಿಗಳು, ಪಕ್ಷದ ಹೈಕಮಾಂಡ್‌ ಇದೆ. ನನ್ನ ರಾಜೀನಾಮೆ ಕೇಳಲು ಆಕೆ ಯಾರು ಎಂದು ಪ್ರಶ್ನಿಸಿದ್ದಾರೆ.

ಮೇ ತಿಂಗಳಲ್ಲಿ ಅನುಪಮಾ ಶೆಣೈ ವರ್ಗಾವಣೆ ಘಟನೆ ನಡೆದ ಅನಂತರ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿಯೇ ಇಲ್ಲ. ಈ ರೀತಿ ಅಪಪ್ರಚಾರ ಏಕೆ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಅನುಪಮಾ ಶೆಣೈ ಅವರ ಫೇಸ್‌ ಬುಕ್‌ ಅಸಲಿಯೋ ನಕಲಿಯೋ ಮೊದಲು ತನಿಖೆಯಾಗಬೇಕೆಂದು ಆಗ್ರಹಿಸಿದ ಅವರು, ಫೇಸ್‌ಬುಕ್‌ ಮೂಲಕ ಯಾರೋ ಷಡ್ಯಂತ್ರ ಮಾಡುತ್ತಿರಬಹುದು. ತಮ್ಮ ರಾಜೀನಾಮೆ ವಿಚಾರ ಇಲ್ಲಿ ಅಪ್ರಸ್ತುತ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT