ಪರಮೇಶ್ವರ್ ನಾಯ್ಕ್ 
ರಾಜಕೀಯ

ರಾಜೀನಾಮೆ ಕೊಡು ಅಂತಾ ಹೇಳೋದಕ್ಕೆ ಅನುಪಮಾ ಶೆಣೈ ಯಾರು? ಪರಮೇಶ್ವರ್ ನಾಯ್ಕ್

ತಮ್ಮ ರಾಜೀನಾಮೆ ಕೇಳಲು ಅನುಪಮಾ ಶೆಣೈ ಯಾರು ಎಂದು ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ ಪರಮೇಶ್ವರ ನಾಯ್ಕ ..

ಚಿಕ್ಕಮಗಳೂರು: ತಮ್ಮ ರಾಜೀನಾಮೆ ಕೇಳಲು ಅನುಪಮಾ ಶೆಣೈ ಯಾರು ಎಂದು ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ ಪರಮೇಶ್ವರ ನಾಯ್ಕ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆಗೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು. ಒಂದು ವೇಳೆ ತಮ್ಮಿಂದ ತಪ್ಪಾಗಿದ್ದರೆ ಅದನ್ನು ವಿಚಾರಿಸಲು ಮುಖ್ಯಮಂತ್ರಿಗಳು, ಪಕ್ಷದ ಹೈಕಮಾಂಡ್‌ ಇದೆ. ನನ್ನ ರಾಜೀನಾಮೆ ಕೇಳಲು ಆಕೆ ಯಾರು ಎಂದು ಪ್ರಶ್ನಿಸಿದ್ದಾರೆ.

ಮೇ ತಿಂಗಳಲ್ಲಿ ಅನುಪಮಾ ಶೆಣೈ ವರ್ಗಾವಣೆ ಘಟನೆ ನಡೆದ ಅನಂತರ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿಯೇ ಇಲ್ಲ. ಈ ರೀತಿ ಅಪಪ್ರಚಾರ ಏಕೆ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಅನುಪಮಾ ಶೆಣೈ ಅವರ ಫೇಸ್‌ ಬುಕ್‌ ಅಸಲಿಯೋ ನಕಲಿಯೋ ಮೊದಲು ತನಿಖೆಯಾಗಬೇಕೆಂದು ಆಗ್ರಹಿಸಿದ ಅವರು, ಫೇಸ್‌ಬುಕ್‌ ಮೂಲಕ ಯಾರೋ ಷಡ್ಯಂತ್ರ ಮಾಡುತ್ತಿರಬಹುದು. ತಮ್ಮ ರಾಜೀನಾಮೆ ವಿಚಾರ ಇಲ್ಲಿ ಅಪ್ರಸ್ತುತ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT