ಕಾಗೆ ಕುಳಿತಿದ್ದ ಸಿಎಂ ಹಳೆ ಕಾರು, ಬಲಚಿತ್ರದಲ್ಲಿ ಸಿಎಂ ಹೊಸ ಕಾರು 
ರಾಜಕೀಯ

ಮೌಢ್ಯ ನಿಷೇಧ ಪರವಾಗಿದ್ದ ಸಿದ್ದರಾಮಯ್ಯ, ಕಾಗೆ ಕೂತಿದ್ದಕ್ಕೆ ಕಾರು ಬದಲಾಯಿಸಿದ್ರು!

ಮುಖ್ಯಮಂತ್ರಿಗಳ ಕಾರಿನ ಮೇಲೆ ಕಾಗೆ ಮರಿ ಕುಳಿತ ಹಿನ್ನೆಲೆಯಲ್ಲಿ , ತಾಂತ್ರಿಕ ತೊಂದರೆ ನೆಪವೊಡ್ಡಿ ಬದಲಾವಣೆ ಮಾಡಿ ಹೊಸ ಕಾರು ಖರೀದಿಸುವ ಪ್ರಯತ್ನ ..

ಬೆಂಗಳೂರು: ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಇದೀಗ ಮೂಢನಂಬಿಕೆ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಕಾಗೆ ಕೂತಿದ್ದ ತಮ್ಮ ಕಾರನ್ನು ತಾಂತ್ರಿಕ ತೊಂದರೆ ನೆಪವೊಡ್ಡಿ ಬದಲಿಸಿದ್ದಾರೆ. ಹೊಸ ಫಾರ್ಚುನರ್ ಕಾರನ್ನು ಖರೀದಿಸಿ ಅದಕ್ಕೆ ಪೂಜೆ ಸಲ್ಲಿಸಿ ಸಚಿವಾಲಯ ಅಧಿಕಾರಿಗಳು ನಿನ್ನೆ ಸಿಎಂ ನಿವಾಸ ಕಾವೇರಿಗೆ ಹಸ್ತಾಂತರಿಸಿದ್ದಾರೆ. ಹೊಸ ಕಾರಿನ ನಂಬರ್ 2016 ಎಂದಿದೆ.

ರಾಜ್ಯಸಭೆ ಚುನಾವಣೆ ತಯಾರಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣದಲ್ಲಿ ಜೂ.2ರಂದು ವಿವಿಧ ಹಂತದ ಸಭೆ ನಡೆಸುತ್ತಿದ್ದಾಗ  ಹೊರಗಡೆ ನಿಂತಿದ್ದ ಕಾರಿನ ಮೇಲೆ ಗಾಯಗೊಂಡಿದ್ದ ಕಾಗೆಯೊಂದು ಹತ್ತಿ ಕುಳಿತಿತ್ತು. ಅದನ್ನು ಓಡಿಸಲು ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಸುಮಾರು ಹೊತ್ತಿನವರೆಗೆ ಕದರಿರಲಿಲ್ಲ. ನಂತರ ಸಿಬ್ಬಂದಿಯೇ ಕೈಯಿಂದ ಕೆಳಗಿಳಿಸಿದ್ದರು. ಈ ಬಗ್ಗೆ ಸುದ್ದಿವಾಹಿನಿಗಳು ವಿಡಿಯೋ ಸಹಿತ ಪ್ರಸಾರ ಮಾಡಿದ್ದರಿಂದ ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು.

ಕಾರಿನ ಮೇಲೆ ಕಾಗೆ ಕುಳಿತಿದ್ದರಿಂದ ಅಪಶಕುನವೆಂದು ಕೆಲವರು ಹೇಳಿದ್ದರು.  ಆದರೆ ಮೂಢನಂಬಿಕೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ಯಾವುದನ್ನೂ ಕೇರ್ ಮಾಡಿರಲಿಲ್ಲ, ಆದರೆ  ಅಂದೇ ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ರಾಜೀನಾಮೆ ಪ್ರಕರಣ ಶುರುವಾಗಿದ್ದರಿಂದ ಸಿಎಂ ಮನಸ್ಸು ಬದಲಾಯಿಸಿದರೆಂದು ಕಾಣುತ್ತದೆ. ಅಪಶಕುನವೆಂದು ತೀರ್ಮಾನಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊಸ ಕಾರು ಖರೀದಿಸಲು ಪ್ರಸ್ತಾವನೆ ಮುಂದಿಟ್ಟಿತ್ತು. ಅದರಂತೆ ಹಳೆ ಕಾರು ಹೋಗಿ ಇದೀಗ ಹೊಸ ಕಾರು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT