ಕಾಗೆ ಕುಳಿತಿದ್ದ ಸಿಎಂ ಹಳೆ ಕಾರು, ಬಲಚಿತ್ರದಲ್ಲಿ ಸಿಎಂ ಹೊಸ ಕಾರು 
ರಾಜಕೀಯ

ಮೌಢ್ಯ ನಿಷೇಧ ಪರವಾಗಿದ್ದ ಸಿದ್ದರಾಮಯ್ಯ, ಕಾಗೆ ಕೂತಿದ್ದಕ್ಕೆ ಕಾರು ಬದಲಾಯಿಸಿದ್ರು!

ಮುಖ್ಯಮಂತ್ರಿಗಳ ಕಾರಿನ ಮೇಲೆ ಕಾಗೆ ಮರಿ ಕುಳಿತ ಹಿನ್ನೆಲೆಯಲ್ಲಿ , ತಾಂತ್ರಿಕ ತೊಂದರೆ ನೆಪವೊಡ್ಡಿ ಬದಲಾವಣೆ ಮಾಡಿ ಹೊಸ ಕಾರು ಖರೀದಿಸುವ ಪ್ರಯತ್ನ ..

ಬೆಂಗಳೂರು: ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಇದೀಗ ಮೂಢನಂಬಿಕೆ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಕಾಗೆ ಕೂತಿದ್ದ ತಮ್ಮ ಕಾರನ್ನು ತಾಂತ್ರಿಕ ತೊಂದರೆ ನೆಪವೊಡ್ಡಿ ಬದಲಿಸಿದ್ದಾರೆ. ಹೊಸ ಫಾರ್ಚುನರ್ ಕಾರನ್ನು ಖರೀದಿಸಿ ಅದಕ್ಕೆ ಪೂಜೆ ಸಲ್ಲಿಸಿ ಸಚಿವಾಲಯ ಅಧಿಕಾರಿಗಳು ನಿನ್ನೆ ಸಿಎಂ ನಿವಾಸ ಕಾವೇರಿಗೆ ಹಸ್ತಾಂತರಿಸಿದ್ದಾರೆ. ಹೊಸ ಕಾರಿನ ನಂಬರ್ 2016 ಎಂದಿದೆ.

ರಾಜ್ಯಸಭೆ ಚುನಾವಣೆ ತಯಾರಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣದಲ್ಲಿ ಜೂ.2ರಂದು ವಿವಿಧ ಹಂತದ ಸಭೆ ನಡೆಸುತ್ತಿದ್ದಾಗ  ಹೊರಗಡೆ ನಿಂತಿದ್ದ ಕಾರಿನ ಮೇಲೆ ಗಾಯಗೊಂಡಿದ್ದ ಕಾಗೆಯೊಂದು ಹತ್ತಿ ಕುಳಿತಿತ್ತು. ಅದನ್ನು ಓಡಿಸಲು ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಸುಮಾರು ಹೊತ್ತಿನವರೆಗೆ ಕದರಿರಲಿಲ್ಲ. ನಂತರ ಸಿಬ್ಬಂದಿಯೇ ಕೈಯಿಂದ ಕೆಳಗಿಳಿಸಿದ್ದರು. ಈ ಬಗ್ಗೆ ಸುದ್ದಿವಾಹಿನಿಗಳು ವಿಡಿಯೋ ಸಹಿತ ಪ್ರಸಾರ ಮಾಡಿದ್ದರಿಂದ ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು.

ಕಾರಿನ ಮೇಲೆ ಕಾಗೆ ಕುಳಿತಿದ್ದರಿಂದ ಅಪಶಕುನವೆಂದು ಕೆಲವರು ಹೇಳಿದ್ದರು.  ಆದರೆ ಮೂಢನಂಬಿಕೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ಯಾವುದನ್ನೂ ಕೇರ್ ಮಾಡಿರಲಿಲ್ಲ, ಆದರೆ  ಅಂದೇ ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ರಾಜೀನಾಮೆ ಪ್ರಕರಣ ಶುರುವಾಗಿದ್ದರಿಂದ ಸಿಎಂ ಮನಸ್ಸು ಬದಲಾಯಿಸಿದರೆಂದು ಕಾಣುತ್ತದೆ. ಅಪಶಕುನವೆಂದು ತೀರ್ಮಾನಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊಸ ಕಾರು ಖರೀದಿಸಲು ಪ್ರಸ್ತಾವನೆ ಮುಂದಿಟ್ಟಿತ್ತು. ಅದರಂತೆ ಹಳೆ ಕಾರು ಹೋಗಿ ಇದೀಗ ಹೊಸ ಕಾರು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT