ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ತಮ್ಮನ್ನು ಕೈಬಿಡುತ್ತಿರುವುದು ಖಚಿತವಾಗುತ್ತಿದ್ದಂತೆ ರೆಬಲ್ ಆಗಿರುವ ವಸತಿ ಸಚಿವ ಅಂಬರೀಷ್ ಅವರು, ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅಂಬರೀಷ್ ಅವರು, ತನ್ನನ್ನು ಸಚಿವ ಸ್ಥಾನದಿಂದ ತೆಗೆದರೆ ಶಾಸಕ ಸ್ಥಾನಕ್ಕು ರಾಜಿನಾಮೆ ಕೊಡುವ ಇಂಗಿತ ವ್ಯಕ್ತಪಡಿಸುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ರಾಜೀನಾಮೆ ನೀಡುವ ಬಗ್ಗೆ ಬೆಂಬಲಿಗರು, ಹಿತೈಷಿಗಳ ಜೊತೆ ಅಂಬಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಯಾವುದೇ ಹಗರಣದಲ್ಲಿ ಭಾಗಿಯಾಗದ ಅಂಬರೀಷ್ ಅವರನ್ನು ಸಂಪುಟದಿಂದ ಕೈಬಿಡುತ್ತಿರುವುದು ಸರಿಯಲ್ಲ. ಹಗರಣದಲ್ಲಿ ಭಾಗಿಯಾದವರು ಸಂಪುಟದಲ್ಲಿದ್ದಾರೆ. ಅಂಬರೀಶ್ ಅವರನ್ನು ಸಂಪುಟದಿಂದ ತೆಗೆದರೆ ಮಂಡ್ಯದಲ್ಲಿ ಕಾಂಗ್ರೆಸ್ ಗೆ ನಷ್ಟ ಎಂದು ಅಂಬರೀಷ್ ಪರಮಾಪ್ತ ಲಿಂಗರಾಜು ಮಾಧ್ಯಮಕ್ಕೆತಿಳಿಸಿದ್ದಾರೆ.
ಇನ್ನು ಶ್ರೀರಂಗಪಟ್ಟಣದಲ್ಲಿ ಅಂಬರೀಷ್ ಅಭಿಮಾನಿಗಳು ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ವಿವಿಧೆಡೆ ಅಂಬಿ ಅಭಿಮಾನಿಗಳು ಧರಣಿ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos