ಯುಟಿ ಖಾದರ್ 
ರಾಜಕೀಯ

ಯು.ಟಿ ಖಾದರ್ ಕ್ರಿಯಾಶೀಲ ಸಚಿವ: ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ

ಆರೋಗ್ಯ ಸಚಿವ ಯುಟಿ ಖಾದರ್ ಕ್ರಿಯಾಶೀಲ ಸಚಿವ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ ನೀಡಿದ್ದಾರೆ.

ನವದೆಹಲಿ: ಸಂಪುಟ ಪುನಾರಚನೆ ವೇಳೆ ಆರೋಗ್ಯ ಸಚಿವ ಯು.ಟಿ ಖಾದರ್ ಅವರನ್ನು ಕೈ ಬಿಟ್ಟು ಅವರ ಖಾತೆಯನ್ನು ಶಾಸಕ ಹ್ಯಾರಿಸ್ ಅವರಿಗೆ ನೀಡಲಾಗುತ್ತದೆ ಎಂಬ ವದಂತಿಗಳು ಕೇಳಿ ಬಂದಿದ್ದವು. ಆರೋಗ್ಯ ಸಚಿವ ಯುಟಿ ಖಾದರ್ ಕ್ರಿಯಾಶೀಲ ಸಚಿವ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ ನೀಡಿದ್ದಾರೆ.

ಜೊತೆಗೆ ಯುಟಿ ಖಾದರ್ ಅವರನ್ನು ಸಂಪುಟದಲ್ಲಿ ಮುಂದುವರಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೋನಿಯಾ ಗಾಂಧಿ ಸೂಚನೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.ಕ್ರಿಯಾಶೀಲ ಸಚಿವರನ್ನು ಸಂಪುಟದಿಂದ ಕೈಬಿಡಬಾರದು ಎಂದು ಸೋನಿಯಾ ಗಾಂಧಿ ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆಯಲ್ಲಿ ಕೈಬಿಡಲಿರುವ ಪಟ್ಟಿಯಲ್ಲಿ ಯುಟಿ ಖಾದರ್ ಅವರ ಹೆಸರೂ ಕೂಡಾ ಇತ್ತು ಎನ್ನಲಾಗಿದೆ.

ಯುಟಿ ಖಾದರ್ ತಮ್ಮ ಕ್ರಿಯಾಶೀಲ ಸಚಿವ, ಮೂರು ವರ್ಷಗಳ ಅವಧಿಯಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಅಂತಹ ಸಚಿವರನ್ನು ಕೈ ಬಿಡಲು ಸಾಧ್ಯವೇ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT