ರಾಜಕೀಯ

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ

Lingaraj Badiger
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಈ ಮೂಲಕ ನಿನ್ನೆಯಷ್ಟೇ ಸಚಿವ ಸ್ಥಾನ ಕಳೆದುಕೊಂಡಿದ್ದ ಗುಂಡೂರಾವ್ ಗೆ ಹೊಸ ಜಾವಾಬ್ದಾರಿ ನೀಡಿದೆ.
ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಅವರ ಅಭಿಮಾನಿಗಳು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಗುಂಡೂರಾವ್ ಅವರಿಗೆ ಕೆಪಿಪಿಸಿ ಕಾರ್ಯಾಧ್ಯಕ್ಷ ಪಟ್ಟ ನೀಡುವ ಮೂಲಕ ಬೆಂಬಲಿಗರ ಸಮಾಧಾನಕ್ಕೆ ಯತ್ನಿಸಿದೆ.
ಈ ಹಿಂದೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು. ಅವರ ನಂತರ ಖಾಲಿ ಉಳಿದುಕೊಂಡಿದ್ದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
SCROLL FOR NEXT