ಮಾಲಿಕಯ್ಯ ಗುತ್ತೆದಾರ್ 
ರಾಜಕೀಯ

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮಾಲಿಕಯ್ಯ ಗುತ್ತೆದಾರ್ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆ ಮಾಡಿದ ಬೆನ್ನಲ್ಲೇ ಸಚಿವ ಆಕಾಂಕ್ಷಿಗಳು ಹಾಗೂ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆ ಮಾಡಿದ ಬೆನ್ನಲ್ಲೇ ಸಚಿವ ಆಕಾಂಕ್ಷಿಗಳು ಹಾಗೂ ಸಚಿವ ಸ್ಥಾನ ಕಳೆದುಕೊಂಡವರು ಸಿಎಂ ವಿರುದ್ಧವೇ ಬಂಡಾಯವೆದ್ದಿದ್ದಾರೆ.
ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕಲಬುರ್ಗಿ ಜಿಲ್ಲೆ ಅಫ್ಜಲಪುರ ಕಾಂಗ್ರೆಸ್ ಶಾಸಕ ಮಾಲಿಕಯ್ಯ ಗುತ್ತೆದಾರ್ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿರುವುದಾಗಿ ಬುಧವಾರ ಹೇಳಿದ್ದಾರೆ.
ತಮ್ಮ ಕ್ಷೇತ್ರದ ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರ ಇಂದು ಸಂಜೆ ತಮ್ಮ ರಾಜಿನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸುವುದಾಗಿ ಗುತ್ತೆದಾರ್ ತಿಳಿಸಿದ್ದಾರೆ.
ಸಚಿವ ಸಂಪುಟ ಪುನಾರಚನೆಯಿಂದಾಗಿ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿ ಬಂಡಾಯವೆದ್ದಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್, ಶ್ರೀನಿವಾಸ್ ಪ್ರಸಾದ್, ಮಾಲಕರೆಡ್ಡಿ ಜೊತೆಗೆ ಮುನಿರತ್ನ ಕೂಡಾ ಅಸಮಾಧಾನವ್ಯಕ್ತಪಡಿಸಿದ್ದರು. ತಾವು 8 ಮಂದಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಬಗ್ಗೆ ಚಿಂತಿಸುತ್ತಿದ್ದೇವೆ ಎಂದು ಸಹ ಮುನಿರತ್ನ ಹೇಳಿಕೆ ನೀಡಿದ್ದರು. ಈಗಾಗಲೇ ರೆಬೆಲ್ ಸ್ಟಾರ್ ಅಂಬರೀಶ್ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದು, ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿಯೋದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT