ವಿನಯ್ ಕುಮಾರ್ ಸೊರಕೆ 
ರಾಜಕೀಯ

ಮಾಜಿ ಸಚಿವ ಸೊರಕೆಗೆ ಸೋನಿಯಾ ಕರೆ, ಪಕ್ಷ ಸಂಘಟನೆಯತ್ತ ಗಮನ ನೀಡಲು ಸೂಚನೆ

ಸಚಿವ ಸಂಪುಟದಿಂದ ತಮ್ಮ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ನಗರಾಭಿವೃದ್ಧಿ ಸಚಿವ ವಿನಯ್ ಸೊರಕೆ ಅವರಿಗೆ ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ...

ಬೆಂಗಳೂರು: ಸಚಿವ ಸಂಪುಟದಿಂದ ತಮ್ಮ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ನಗರಾಭಿವೃದ್ಧಿ ಸಚಿವ ವಿನಯ್ ಸೊರಕೆ ಅವರಿಗೆ ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೂರವಾಣಿ ಕರೆ ಮಾಡಿದ್ದು, ಪಕ್ಷ ಸಂಘಟನೆಯತ್ತ ಗಮನ ನೀಡುವಂತೆ ಸೂಚಿಸಿದ್ದಾರೆ.
ಸಚಿವ ಸ್ಥಾನ ಕಳೆದುಕೊಂಡ ಹಲವು ಹಲವು ಅತೃಪ್ತ ಶಾಸಕರು ನಾಯಕತ್ವ ಬದಲಾವಣೆಯ ಕೂಗು ಎತ್ತಿದ್ದು, ಇದರ ಬೆನ್ನಲ್ಲೇ ಇಂದು ಅತೃಪ್ತ ಸೊರಕೆಗೆ ಕರೆ ಮಾಡಿದ ಸೋನಿಯಾ ಗಾಂಧಿ, ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದಾರೆ. ಈ ವೇಳೆ ಸೊರಕೆ ಅವರು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಕಾರಣವೇನು ಎಂದು ಸೋನಿಯಾ ಗಾಂಧಿಯನ್ನು ಕೇಳಿದ್ದಾರೆ. ಅಲ್ಲದೇ ಬಿಲ್ಲವ ಸಮುದಾಯದವನಾದ ನಾನು ಸಚಿವ ಸಂಪುಟದಿಂದ ಹೊರಗುಳಿದಿರುವುದಕ್ಕೆ ಸಮುದಾಯಕ್ಕೆ ಅಸಮಾಧಾನ ತಂದಿದೆ ಎಂದಿದ್ದಾರೆ.
ನಾನು ಬಿಲ್ಲವ ಸಮುದಾಯದ ನಾಯಕನಾಗಿ ಹಲವು ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ. ಆದರೆ, ನನ್ನನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಇದು ನನಗೆ ಬೇಸರ ತಂದಿದೆ ಎಂದಿದ್ದಾರೆ. ಇದಕ್ಕೆ ಉತ್ತರಿಸಿದ ಸೋನಿಯಾ ನಾವು ಯಾವ ಸಮುದಾಯದ ನಾಯಕರನ್ನು ಕೈಬಿಡುತ್ತಿಲ್ಲ. ನೀವು ಪಕ್ಷ ಸಂಘಟನೆಯತ್ತ ಗಮನ ನೀಡಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT