ಅಂಬರೀಷ್ 
ರಾಜಕೀಯ

ಅಂಬರೀಷ್ ಗಾಗಿ ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ದ

ನಟ ಅಂಬರೀಶ್‌ಗೆ ಸಚಿವ ಸ್ಥಾನ ನೀಡುವುದಾದರೆ ನಾನು ಸಚಿವ ಸ್ಥಾನವನ್ನು ತ್ಯಜಿಸಲು ಸಿದ್ದ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ..

ಚಿತ್ರದುರ್ಗ: ನಟ ಅಂಬರೀಶ್‌ಗೆ ಸಚಿವ ಸ್ಥಾನ ನೀಡುವುದಾದರೆ ನಾನು ಸಚಿವ ಸ್ಥಾನವನ್ನು ತ್ಯಜಿಸಲು ಸಿದ್ದ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.

ಅಂಬರೀಷ್ ನಾನು ಒಳ್ಳೆಯ ಸ್ನೇಹಿತರು. ಅವರಿಗೆ ಉತ್ತಮ ಸ್ಥಾನಮಾನ ನೀಡಬೇಕು. ಅಗತ್ಯವಿದ್ದರೆ ನನ್ನ ಸ್ಥಾನವನ್ನೇ ಬಿಟ್ಟುಕೊಡುತ್ತೇನೆ ಎಂದು ಎಂದು ಅವರು ಹೇಳಿದ್ದಾರೆ.

ಮಾಜಿ ಸಚಿವ ಅಂಬರೀಶ್ ಹಿರಿಯ ನಾಯಕರಾಗಿದ್ದರಿಂದ ಅವರಿಗೆ ಉತ್ತಮ ಸ್ಥಾನ ದೊರೆಯಬೇಕು. ಅವರಿಗಾಗಿ ಸಚಿವ ಸ್ಥಾನ ಬಿಟ್ಟುಕೊಡಲು ನಾನು ಸಿದ್ದವಾಗಿದ್ದೇನೆ ಎಂದು ಘೋಷಿಸಿದ್ದಾರೆ. ಅಂಬರೀಶ್‌ಗೆ ಅವರ ಘನತೆ ಗೌರವಕ್ಕೆ ತಕ್ಕಂತೆ ಯಾವುದಾದರೂ ಉತ್ತಮ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಚಿವ ಮಲ್ಲಿಕಾರ್ಜುನ್, ಎಲ್ಲರಲ್ಲೂ ಶರಣರನ್ನು ಕಾಣಬೇಕಾಗಿದೆ. ಶ್ರೀಗಳ ಆಶೀರ್ವಾದ ದೊರೆತಿದ್ದರಿಂದ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT