ಎಚ್.ಸಿ.ಮಹದೇವಪ್ಪ 
ರಾಜಕೀಯ

ಬಿಜೆಪಿ ನಾಯಕ ಈಶ್ವರಪ್ಪ 'ಹುಚ್ಚು ನಾಯಿ' ಇದ್ದಂತೆ: ಸಚಿವ ಮಹದೇವಪ್ಪ

ತಮ್ಮ ಪುತ್ರ ಹಾಗೂ ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ....

ಮೈಸೂರು: ತಮ್ಮ ಪುತ್ರ ಹಾಗೂ ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈಶ್ವರಪ್ಪ 'ಹುಚ್ಚು ನಾಯಿ' ಇದ್ದಂತೆ ಎಂದು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಈಶ್ವರಪ್ಪನವರ ಆರೋಪದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸದ ಸಚಿವರು, ಅವರ ಯಾವುದೇ ಆರೋಪಗಳಿಗೆ ನಾನು ಪ್ರತಿಕ್ರಿಯಿಸಲ್ಲ.ನನ್ನ ಹಾಗೂ ನನ್ನ ಮಗನ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ್ದಂತೆ ಅವರ ವಿರುದ್ಧ ಯಾವುದೇ ಮಾನನಷ್ಟ ಮೊಕದಮ್ಮೆ ಸಹ ದಾಖಲಿಸಲ್ಲ. ಮಾನ ಇಲ್ಲದವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿ ಏನ್ ಪ್ರಯೋಜನ ಎಂದರು.
ಇದೇ ವೇಳೆ ನನ್ನ ಮಗ ಅಕ್ರಮವಾಗಿ ಒಂದು ಬಾಂಡ್ಲಿ ಮರಳು ಸಾಗಿಸಿದ್ದನ್ನು ಅವರು ದಾಖಲೆ ಸಮೇತ ಸಾಬೀತುಪಡಿಸಿದರೆ ಸಚಿವ ಸ್ಥಾನ ರಾಜಿನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು.
ನಿನ್ನೆಯಷ್ಟೇ ಮೈಸೂರು ಪ್ರಾಂತ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತಮ್ಮ ಪುತ್ರ ಸುನೀಲ್ ಬೋಸ್ ಜೊತೆ ಸಚಿವ ಮಹದೇವಪ್ಪ ಭಾಗಿಯಾಗಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ಅವರು ಆರೋಪಿಸಿದ್ದರು. ಅಲ್ಲದೆ ಅಪ್ಪ ಮಕ್ಕಳು ನಿರಂತರವಾಗಿ ಮರಳು ಲೂಟಿ ನಡೆಸುತ್ತಿದ್ದರೂ ಪೊಲೀಸರು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT