ನೂತನ ಶಾಸಕರುಗಳ ಜೊತೆ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಮೇಲ್ಮನೆ ಸದಸ್ಯರಿಗೆ ಸಿಎಂ ಪಾಠ: ಚಕ್ಕರ್ ಹೊಡೆದ ಸದಸ್ಯರು

ವಿಧಾನಮಂಡಲದ ಕಲಾಪಗಳಿಗೆ ಶಾಸಕರು ಚಕ್ಕರ್ ಹೊಡೆಯುವುದು ಸಾಮಾನ್ಯ. ಆದರೆ, ತರಬೇತಿ ಕಾರ್ಯಕ್ರಮಕ್ಕೂ ಗೈರುಹಾಜರಾಗುವ ಮೂಲಕ ಸಂಸದೀಯ..

ಬೆಂಗಳೂರು: ವಿಧಾನಮಂಡಲದ ಕಲಾಪಗಳಿಗೆ ಶಾಸಕರು ಚಕ್ಕರ್ ಹೊಡೆಯುವುದು ಸಾಮಾನ್ಯ. ಆದರೆ, ತರಬೇತಿ ಕಾರ್ಯಕ್ರಮಕ್ಕೂ ಗೈರುಹಾಜರಾಗುವ ಮೂಲಕ ಸಂಸದೀಯ ಕಲಾಪದ ಬಗೆಗಿನ ತಮ್ಮ ಆಸಕ್ತಿ ಅನಾವರಣ ಮಾಡಿದ್ದಾರೆ.

ವಿಧಾನಸಭೆ ಹಾಗೂ ವಿಧಾನಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಲಾಗಿದ್ದ ತರಬೇತಿ ಶಿಬಿರಕ್ಕೆ 11 ಶಾಸಕರು ಮಾತ್ರ ಹಾಜರಾಗಿದ್ದರು. 66 ಶಾಸಕರಿಗೆ ಆಹ್ವಾನ ನೀಡಲಾಗಿತ್ತು. ಸಿಎಂ ಕಾರ್ಯಕ್ರಮಕ್ಕೆ ಹಾಜರಾದಾಗ ಸಭಾಂಗಣದಲ್ಲಿ 6 ಎಂಎಲ್​ಸಿಗಳಿದ್ದರು. ಸಿಎಂ ಭಾಷಣ ಮುಗಿಯುವ ವೇಳೆಗೆ 11 ಮಂದಿಯಾದರು.

ಶಾಸಕರು ಶಿಬಿರಕ್ಕೆ ಬರದಿರುವ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು. ಸಿದ್ಧತೆ ಮಾಡಿಕೊಳ್ಳಿ: ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಶಾಸಕರು ಸದನಕ್ಕೆ ಬರುವಾಗ ಪೂರ್ಣ ಮಾಹಿತಿಯೊಂದಿಗೆ ಬರಬೇಕು. ‘ಹೊದ ಪುಟ್ಟ, ಬಂದ ಪುಟ್ಟ’ ಎಂಬ ರೀತಿಯಲ್ಲಿ ಸದನಕ್ಕೆ ಬಂದರೆ ಪ್ರಯೋಜನವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷ ಶಿವಶಂಕರರೆಡ್ಡಿ ಮತ್ತಿತರರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT